Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂವರು ಸಾವು – ಹಲವರು ಸಿಲುಕಿರುವ ಶಂಕೆ

0

ಜಾರ್ಖಂಡ್ : ಅಕ್ರಮ ಗಣಿ ಜಾರ್ಖಂಡ್ ನ ಭೌರಾ ಕಾಲೇರಿ ಪ್ರದೇಶದಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕಲ್ಲಿದ್ದಲು ಗಣಿ ಕುಸಿದು ಮೂವರು ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಧನ್ಬಾದ್ನಿಂದ 21 ಕಿ.ಮೀ ದೂರದಲ್ಲಿರುವ ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ ಭೌರಾ ಕಲ್ಲಿದ್ದಲು ಪ್ರದೇಶದಲ್ಲಿ ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಈ ಘಟನೆ ನಡೆದಿದೆ.

ಉಸ್ತುವಾರಿ ಸಚಿವರ ನೇಮಕ – ದ.ಕ. ಜಿಲ್ಲೆಗೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್

ಸ್ಥಳೀಯರ ಸಹಾಯದಿಂದ, ಅವಶೇಷಗಳ ಅಡಿಯಿಂದ ಮೂವರನ್ನು ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದನ್ನು ಘೋಷಿಸಿದ್ದಾರೆ. ಮೃತ ಮೂವರನ್ನು ಒಂದು ಮಗು, ಓರ್ವ ಮಹಿಳೆ ಮತ್ತು 25 ವರ್ಷದ ಪುರುಷ ಎಂದು ಗುರುತಿಸಲಾಗಿದೆ

ರಕ್ಷಣಾ ಸಿಬ್ಬಂದಿಯು ಸಂತ್ರಸ್ತರನ್ನು ಪತ್ತೆಹಚ್ಚಿದ ನಂತರ ಸತ್ತವರ ಸಂಖ್ಯೆ ಮತ್ತು ಸಿಕ್ಕಿಬಿದ್ದಿರುವ ಅಥವಾ ಗಾಯಗೊಂಡವರ ನಿಖರವಾದ ಸಂಖ್ಯೆಯು ತಿಳಿಯುತ್ತದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಕುಮಾರ್ ಹೇಳಿದ್ದಾರೆ

ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

Leave A Reply

Your email address will not be published.