ಗಾಂಧಿನಗರ: ಗುಜರಾತ್ನ ಜುನಾಗಢದಲ್ಲಿ ಆಕ್ರಮವಾಗಿ ಮಸೀದಿ ನಿರ್ಮಿಸಿದ ಕುರಿತು ನಗರ ಪಾಲಿಕೆ ಅಧಿಕಾರಿಗಳು ನೋಟಿಸ್ ನೀಡಿದ್ದಕ್ಕೆ ರಾತ್ರೋರಾತ್ರಿ ಗಲಾಟೆ ನಡೆದಿದೆ.
ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಉದ್ರಿಕ್ತಗೊಂಡ ಮುಸ್ಲಿಮರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದೇ ವೇಳೆ ಕೆಲ ವಾಹನಗಳಿಗೂ ಬೆಂಕಿ ಹಚ್ಚಲಾಗಿದ್ದು , ಏಕಾಏಕಿ ದಾಳಿ ಮಾಡಿದ ಕಾರಣ ಹಲವು ಪೊಲೀಸರಿಗೆ ಗಾಯಗಳಾಗಿವೆ . ಹಾಗೆಯೇ , ಗಲಾಟೆಯ ವೇಳೆ ಓರ್ವ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಬಳಿಕ ಮತ್ತೊಂದು ಶಾಕ್: ಸೋಲಾರ್ ಸಬ್ಸಿಡಿ ರದ್ದುಗೊಳಿಸಿದ ಸರ್ಕಾರ.!
ಜುನಾಗಢದ ಮಾಜೇವಾಡಿ ಗೇಟ್ ಬಳಿ ಸರ್ಕಾರದ ಜಾಗದಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂಬ ಆರೋಪವಿದೆ. ಅಕ್ರಮವಾಗಿ ಮಸೀದಿ ನಿರ್ಮಾಣದ ಹಿನ್ನೆಲೆಯಲ್ಲಿ ನಗರ ಪಾಲಿಕೆ ಅಧಿಕಾರಿಗಳು ಈ ಕುರಿತು ಮಸೀದಿ ಆಡಳಿತ ಮಂಡಳಿಗೆ ನೋಟಿಸ್ ನೀಡಿದ್ದಾರೆ. ಐದು ದಿನದಲ್ಲಿ ಮಸೀದಿ ನಿರ್ಮಾಣದ ಕುರಿತು ದಾಖಲೆಗಳನ್ನು ಒದಗಿಸಬೇಕು ಎಂದು ಸೂಚಿಸಿದ್ದಾರೆ.
ಒಂದೆಡೆ ಮಸೀದಿ ಆಡಳಿತ ಮಂಡಳಿಯು ಪೊಲೀಸರಿಗೆ ಸಮರ್ಪಕವಾಗಿ ದಾಖಲೆ ನೀಡಿಲ್ಲ. ಮತ್ತೊಂದೆಡೆ , ನೂರಾರು ಮುಸ್ಲಿಮರು ಶುಕ್ರವಾರ ರಾತ್ರಿ ಏಕಾಏಕಿ ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಇದರಿಂದಾಗಿ ಜುನಾಗಢದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ .ಪೊಲೀಸರು 174 ಮಂದಿಯನ್ನು ಬಂಧಿಸಿದ್ದಾರೆ. ಸಕ್ರಮವಾಗಿ ಮಸೀದಿ ನಿರ್ಮಾಣದ ಕುರಿತು ಆಡಳಿತ ಮಂಡಳಿಯು ಯಾವುದೇ ಪ್ರತಿಕ್ರಿಯೆ ನೀಡದ ಕಾರಣ ಮಸೀದಿಯನ್ನು ಕೆಡವಲು ತೀರ್ಮಾನಿಸಲಾಗಿದೆ. ಇದನ್ನು ವಿರೋಧಿಸಿ ನೂರಾರು ಮುಸ್ಲಿಮರು ಹಿಂಸಾಚಾರಕ್ಕೆ ಮುಂದಾಗಿದ್ದಾರೆ.