Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಅಸ್ಸಾಂನಲ್ಲಿ ಭೀಕರ ಪ್ರವಾಹ – ಓರ್ವ ಮೃತ್ಯು, ಸಂಕಷ್ಟಕ್ಕೆ ದಸಿಲುಕಿ 5 ಲಕ್ಷ ಮಂದಿ

0

ಗುವಾಹಟಿ: ಅಸ್ಸಾಂನಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಓರ್ವ ಮೃತಪಟ್ಟು, ಸುಮಾರು ಐದು ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರವಾಹದಿಂದ ಬ್ರಹ್ಮಪುತ್ರ ಸೇರಿದಂತೆ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

ಇನ್ನು ಪ್ರವಾಹದ ಮಟ್ಟ ಮತ್ತಷ್ಟು ಹೆಚ್ಚಗೊಳ್ಳುವ ನಿರೀಕ್ಷೆ ಇದ್ದು, ಪ್ರವಾಹಕ್ಕೆ ಸಂಬಂಧಿಸಿ ಮುಂಜಾಗ್ರತಾ ಕ್ರಮವಾಗಿ ಲಕ್ಷಾಂತರ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಉದಲ್‌ಗುರಿ ಜಿಲ್ಲೆಯ ತಮುಲ್‌ಪುರದಲ್ಲಿ ಪ್ರವಾಹದಿಂದಾಗಿ ಓರ್ವ ಸಾವನ್ನಪ್ಪಿರುವ ವರದಿಯಾಗಿದ್ದು, ಗುರುವಾರ ಸಂಜೆಯವರೆಗೆ 4.95 ಲಕ್ಷ ಜನರು ಪ್ರವಾಹಕ್ಕೆ ಸಿಲುಕಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

Leave A Reply

Your email address will not be published.