Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಅಸ್ಸಾಂ ಮುಖ್ಯಮಂತ್ರಿಗಳಿಂದ ತುಳು ಭಾಷೆ ಸ್ಥಾನಮಾನಕ್ಕೆ ಹಾರೈಕೆ

0

ಮಂಗಳೂರು: ಜೈ ತುಲುನಾಡ್(ರಿ.) ಸಂಘಟನೆಯು ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂದರ್ಭದಲ್ಲಿ ಬಿಡುಗಡೆಗೊಳಿಸಿದ ‘ತುಲುಪುರ್ಪ’ ಕವನ ಸಂಕಲನ ಕೃತಿಯನ್ನು ಶ್ಲಾಘಿಸಿ ಅಸ್ಸಾಂ ಮಾನ್ಯ ಮುಖ್ಯಮಂತ್ರಿ ಡಿ.ಹಿಮಂತ ಬಿಸ್ವಾ ಶರ್ಮಾರವರು ಸಂಘಟನೆಯ ಅಧ್ಯಕ್ಷರಿಗೆ ಪತ್ರವನ್ನು ಬರೆದಿದ್ದಾರೆ.

ದೇಶದಾದ್ಯಂತ ತುಳು ಭಾಷೆಯನ್ನು ಪರಿಚಯಿಸುವ ಹಾಗೂ ಭಾಷೆಗೆ ಮಾನ್ಯತೆಯನ್ನು ದೊರಕಿಸಿಕೊಡುವಲ್ಲಿ  ಈ ಕೃತಿಯನ್ನು  ಪ್ರಧಾನಿಯವರಿಗೆ, ರಾಷ್ಟ್ರಪತಿಗಳಿಗೆ ಹಾಗೂ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕಳುಹಿಸಿ ಕೊಡಲಾಗಿದ್ದು, ಇದೀಗ ಕೃತಿ ಸ್ವೀಕರಿಸಿದ ಅಸ್ಸಾಂ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಿಂದ ಪ್ರತಿಕ್ರಿಯೆಯು ಬಂದಿರುವುದು ಸಂತಸವನ್ನು ತಂದಿದೆ.

ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತದಲ್ಲಿ ಹಲವು ಭಾಷೆಗಳಿವೆ. ಪಂಚ ಮಹಾದ್ರಾವಿಡ ಭಾಷೆಗಳಲ್ಲಿ ತುಳು ಭಾಷೆಯೂ ಒಂದು.

ನಮ್ಮ ಐಕ್ಯತೆಯನ್ನು ಸಧೃಡಗೊಳಿಸುವಲ್ಲಿ ಭಾಷೆಗಳು ಆಧಾರ ಸ್ತಂಭಗಳಾಗಿವೆ. ತುಳು ಭಾಷೆಗೆ ಮಾನ್ಯತೆ ದೊರೆಯಬೇಕು.

ಈ ನಿಟ್ಟಿನಲ್ಲಿ ಜೈ ತುಲುನಾಡ್ (ರಿ)ನ ಕಾರ್ಯ ಶ್ಲಾಘನೀಯವೆಂದು ಪ್ರತಿಕ್ರಿಯಿಸಿದ್ದಾರೆ ಎಂದು ಸಂಘಟನೆಯು ತಿಳಿಸಿರುತ್ತದೆ.

ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರುಗಳ ಆಶೀರ್ವಚನದ ನುಡಿಯೊಂದಿಗೆ, ಈ ಕೃತಿಗೆ ತುಲುನಾಡಿನ ಅಲುಪ ವಂಶಸ್ಥ ಡಾ.ಆಕಾಶ್ ರಾಜ್ ಜೈನ್. ಮಾಜಿ ಸದಸ್ಯರು ಕರ್ನಾಟಕ ತುಲು ಸಾಹಿತ್ಯ ಅಕಾಡೆಮಿ. ಇವರು ಮುನ್ನುಡಿ ಬರೆದಿದ್ದಾರೆ.

ಬೆನ್ನುಡಿಯನ್ನು ಇನ್ನೊಬ್ಬ ಜನಮೆಚ್ಚಿದ ಧರ್ಮದರ್ಶಿಗಳಾದ ಶ್ರೀ ಹರಿಕೃಷ್ಣ ಪುನರೂರು ಬರೆದಿದ್ದಾರೆ.

ಈ ಕೃತಿಯಲ್ಲಿ ಇಂಗ್ಲಿಷ್, ಹಿಂದಿ, ಕನ್ನಡ,ತುಲು ಭಾಷೆಗಳಲ್ಲಿ ಮುದ್ರಣಗೊಂಡಿದ್ದು, ಕೃತಿಯ ತಿರುಳನ್ನು ದೇಶದಾದ್ಯಂತ ಎಲ್ಲರಿಗೂ ತಿಳಿದುಕೊಳ್ಳಲು ಸಹಕಾರಿಯಾಗುವಂತೆ ಮುದ್ರಿಸಿರುವುದು ಇದರ ವಿಶೇಷತೆಯಾಗಿದೆ.

ತುಲು ಪುರ್ಪದ ಕೆಲಸವನ್ನು ಶ್ಲಾಘಿಸಿರುವ ಅಸ್ಸಾಂ ಮುಖ್ಯಮಂತ್ರಿಗಳಿಗೆ ಜೈ ತುಲುನಾಡ್ (ರಿ.) ಸಂಘಟನೆಯು ಕೃತಜ್ಞತೆಯನ್ನು ಸಲ್ಲಿಸಿದೆ.

ತುಲು ಪುರ್ಪ ಕೃತಿಯ ಸಂಪಾದಕೀಯ ಬಳಗದಲ್ಲಿ ಸಂಘಟನೆಯ 2022-23ನೇ ಸಾಲಿನ ಸಮಿತಿಯ ಅಧ್ಯಕ್ಷರಾದ ಶ್ರೀ ಅಶ್ವಥ್ ತುಲುವೆ, ಪ್ರಧಾನ ಕಾರ್ಯದರ್ಶಿ ಶ್ರೀ ಅವಿನಾಶ್ ಮುಕ್ಕ,2022 -23 ನೇ ಸಾಲಿನ ತುಲು ಸಾಹಿತ್ಯ ಸಮಿತಿಯ ಮೇಲ್ವಿಚಾರಕರಾದ ಕುಶಲಾಕ್ಷಿ.ವಿ.ಕುಲಾಲ್ ಕಣ್ವತೀರ್ಥ, ಸಹ ಮೇಲ್ವಿಚಾರಕರಾದ ಗೀತಾ ಲಕ್ಷ್ಮೀಶ್, ಸಂಘಟನಾ ಕಾರ್ಯದರ್ಶಿ ಸದಾಶಿವ ಮುದ್ರಾಡಿ, ಕಿರಣ್ ತುಲುವ, ನಿಶ್ಚಿತ್.ಜಿ ರಾಮಕುಂಜ, ಜಗದೀಶ್ ಗೌಡ ಕಲ್ಕಲ, ಯತೀಶ್ ಕುಮಾರ್, ಪ್ರಚಾರ ಸಮಿತಿಯ ಮೇಲ್ವಿಚಾರಕ ವಿನಯ್ ರೈ, ಸುಮಂತ್ ಹೆಬ್ರಿ, ಸಂಜನಾ ಪೂಜಾರಿ, ಪೃಥ್ವಿ ತುಲುವೆ,ರಂಜನ್ ಎಸ್ ವೈ .ಬೆಳ್ತಂಗಡಿ, ಶರತ್ ಕೊಡವೂರು, ಶಶಿಕಲಾ, ಪ್ರಜ್ಞಾ, ಪ್ರಹ್ಲಾದ್ ತಂತ್ರಿ ಹಾಗೂ ಇನ್ನಿತರರು ಈ ಕೃತಿಯನ್ನು ಬೆಳಕಿಗೆ ತರುವಲ್ಲಿ ಶ್ರಮಿಸಿರುತ್ತಾರೆ.

ರೆದಿದ್ದಾರೆ.

Leave A Reply

Your email address will not be published.