ಬೆಂಗಳೂರು: ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಒಟ್ಟು ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಅದರಲ್ಲಿ “ಯುವನಿಧಿ” ಯೋಜನೆ ಕೂಡ ಒಂದು. ನಿರುದ್ಯೋಗಿ ಪದವೀಧರರಿಗೆ ₹3 ಸಾವಿರ ಹಾಗೂ ನಿರುದ್ಯೋಗಿ ಡಿಪ್ಲೊಮಾ ಪದವೀಧರರಿಗೆ ₹1,500 ನೀಡೋದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿತ್ತು. ಈಗ ಚುನಾವಣೆ ಮುಗಿದು ಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಸರಕಾರವೂ ರಚನೆಯಾಗಿದೆ. ಆದ್ರೆ ಈಗ ಕಾಂಗ್ರೆಸ್ ಸರಕಾರ ತಾನು ಘೋಷಿಸಿದ್ದ “ಯುವನಿಧಿ” ಯೋಜನೆಯ ಪ್ರಸ್ತಾವನೆ ಕಂಡು ಯುವಜನರು ದಂಗಾಗಿದ್ದಾರೆ. ಈ ಯೋಜನೆ 2022-23ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಮಾತ್ರ ಅನ್ವಯ ಆಗುತ್ತೆ. ಭತ್ಯೆಗಾಗಿ ಅರ್ಜಿ ಸಲ್ಲಿಸಿ ಅರ್ಹ ಫಲಾನುಭವಿಯಾದ ನಂತರದ ಎರಡು ವರ್ಷಗಳವರೆಗೆ ಅಥವಾ ಉದ್ಯೋಗ ಸಿಗುವವರೆಗೆ ಮಾತ್ರ ಭತ್ಯೆ ಸಿಗಲಿದೆ. ಈ ಯೋಜನೆಯನ್ನು ಅನುಷ್ಟಾನಗೊಳಿಸುವ ಬಗ್ಗೆ ವಿವರವಾದ ಷರತ್ತು ಮತ್ತು ನಿಬಂಧನೆಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಸರಕಾರ ತನ್ನ ಪ್ರಸ್ತಾವನೆಯಲ್ಲಿ ತಿಳಿಸಿದೆ.
[vc_row][vc_column]
BREAKING NEWS
- ಪೊಲೀಸರು ಹಣೆಗೆ ಕುಂಕುಮ, ವಿಭೂತಿ ಇಡಬಾರದೆಂದು ಹೇಳಿಲ್ಲ -ಗೃಹ ಸಚಿವರ ಸ್ಪಷ್ಟನೆ
- ಶಾಸನ ಸಭೆಯ ಗೌರವ ಕಾಪಾಡಿ ಸ್ಪೀಕರ್ ಖಾದರ್ ಗೆ ಉಪರಾಷ್ಟ್ರಪತಿ ಸಲಹೆ
- ಸಾಲಗಾರರಿಗೆ ಸಂತಸ ಸುದ್ದಿಯನ್ನು ನೀಡಿದ ಆರ್ಬಿಐ : ರೆಪೊ ದರವನ್ನು ಯಥಾಸ್ಥಿತಿಯಲ್ಲಿಡಲು ನಿರ್ಧಾರ
- ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ, ಅರ್ಜಿ ಸಲ್ಲಿಸೋದು ಹೇಗೆ?
- ಬಿಜೆಪಿ ಕೋರ್ ಕಮಿಟಿ ಸಭೆ ಧಿಡೀರ್ ರದ್ದು
- ಭಾರತಕ್ಕೆ ಕಾದಿದೆ ಒಂದು ಗಂಡಾಂತರ.! – ಮತ್ತೊಂದು ಭಯಾನಕ ಭವಿಷ್ಯ ನುಡಿದ ಕೋಡಿಮಠ ಶ್ರೀ
- ಒಡಿಶಾ ರೈಲು ದುರಂತದಲ್ಲಿ ಕಾಣೆಯಾಗಿ ಟಿವಿ ಲೈವ್ನಲ್ಲಿ ಪತ್ತೆಹಚ್ಚಿ ಪೋಷಕರನ್ನು ಸೇರಿದ ಪುತ್ರ!
- ಕೇರಳಕ್ಕೆ ಮುಂಗಾರು ಆಗಮನ -ಮಳೆ ಆರಂಭ
- ಕಟೀಲು ಕ್ಷೇತ್ರದಲ್ಲಿ ಬತ್ತಿ ಹೋದ ನಂದಿನಿ ನದಿ :31 ವರ್ಷಗಳ ಬಳಿಕ ತೀವ್ರ ಜಲಕ್ಷಾಮ
- ಒಡಿಶಾದಲ್ಲಿ ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು – 6 ಮಂದಿ ಮೃತ್ಯು