Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಇಂದು ಕಾಂಗ್ರೆಸ್‌ ಮಹತ್ವದ ಸಭೆ – ಲೋಕಸಭೆ ಸಮರಕ್ಕೆ ಸಿದ್ದತೆ

0

ಬೆಂಗಳೂರು: ಪಕ್ಷ ಸಂಘಟನೆ ಮತ್ತು ಲೋಕಸಭೆ ಚುನಾವಣೆ ಸಿದ್ಧತೆಗೆ ವೇಗ ನೀಡುವ ಉದ್ದೇಶದಿಂದ ಕೆಪಿಸಿಸಿಯು ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ಸರ್ವ ಸದಸ್ಯರ ಸಭೆಯನ್ನು ಕರೆದಿದೆ.

ಇಂದಿರಾಗಾಂಧಿ ಭವನದ ಭಾರತ್‌ ಜೋಡೋ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್, ಎಐಸಿಸಿ ಮತ್ತು ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಎಲ್ಲ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

ಸರ್ಕಾರದ ಮಹತ್ವಾಕಾಂಕ್ಷಿ 5 ಗ್ಯಾರಂಟಿ ಯೋಜನೆ ಬಗ್ಗೆ ಮನೆ-ಮನೆಗೆ ಮಾಹಿತಿ ನೀಡುವುದು, ಎಂಪಿ ಚುನಾವಣೆಯಲ್ಲಿ ಕನಿಷ್ಟ 20 ಸ್ಥಾನ ಗೆಲ್ಲಿಸುವುದು, ಪಕ್ಷದ ಸಂಘಟನೆಗೆ ಚುರುಕು ಮುಟ್ಟಿಸುವುದು ಹಾಗೂ ಲೋಕಸಭೆ ಚುನಾವಣೆ ಕೈ ಪಡೆಯನ್ನು ಸನ್ನದ್ಧಗೊಳಿಸುವುದು ಸಭೆಯ ಮುಖ್ಯ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

 

Leave A Reply

Your email address will not be published.