Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಇಂಧ್ರಧನುಶ್ ಲಸಿಕೆ ಹಾಕಿ ಮಗುವಿಗೆ ‘ತೇಜಸ್ವಿ ಸೂರ್ಯ’ ಎಂದು ಹೆಸರಿಟ್ಟ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್!

0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಾಯಕರ ವಿರುದ್ಧ ಸದಾ ವಾಗ್ದಾಳಿ ನಡೆಸುವ ಬಿಜೆಪಿಯ ಸಂಸದ ತೇಜಸ್ವಿ ಸೂರ್ಯ ಅವರ ಹೆಸರನ್ನು ತೋಟಗಾರಿಕೆ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಅವರು ತಮ್ಮ ಕ್ಷೇತ್ರದ ಮಗುವೊಂದಕ್ಕೆ ಇಟ್ಟಿದ್ದಾರೆ. ಹೌದು. ಶಾಮನೂರು ಶಿವಶಂಕರಪ್ಪ ಅವರ ಪುತ್ರ ಹಾಗೂ ತೋಟಗಾರಿಕಾ ಸಚಿವ ಶಾಮನೂರು ಶಿವಶಂಕರಪ್ಪ ಮಲ್ಲಿಕಾರ್ಜುನ ಸೋಮವಾರ ದಾವಣಗೆರೆಯಲ್ಲಿ ಇಂದ್ರಧನುಶ್ ಲಸಿಕಾ ಅಭಿಯಾನ 5.0ಗೆ ಚಾಲನೆ ನೀಡಿದರು. ಈ ವೇಳೆ ವಿಶೇಷವಾದ ಪ್ರಸಂಗ ನಡೆದಿದೆ. ದಾವಣಗೆರೆಯಲ್ಲಿ ಇಂದ್ರಧನುಷ್ ಲಸಿಕೆ ಹಾಕಿದ ನಂತರ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ಅವರು ಮಗುವಿಗೆ ಕೆನ್ನೆಗೆ ಮುತ್ತಿಕ್ಕಿದರು. ಈ ವೇಳೆ ಮಗುವಿನ ಪೋಷಕರು, ತಮ್ಮ ಮಗುವಿಗೆ ಹೆಸರಿಡುವಂತೆ ಸಚಿವರನ್ನು ಕೇಳಿಕೊಂಡಿದ್ದಾರೆ. ಆಗ ಮಗುವನ್ನು ಎತ್ತಿಕೊಂಡ ಮಲ್ಲಿಕಾರ್ಜುನ್ ಮಗುವಿನ ಕಿವಿಯಲ್ಲಿ ತೇಜಸ್ವಿ ಸೂರ್ಯ… ತೇಜಸ್ವಿ ಸೂರ್ಯ.. ತೇಜಸ್ವಿ ಸೂರ್ಯ ಎಂದು ಗುನುಗಿದ್ದಾರೆ. ಮಗುವಿಗೆ ಹೆಸರಿಡುವ ವೇಳೆ ಸಚಿವರಿಗೆ ತೇಜಸ್ವಿ ಸೂರ್ಯ ನೆನಪಾದ್ರಾ? ಅಥವಾ ಮಗುವಿನ ಮುಖ ಸೂರ್ಯನಂತೆ ತೇಜಸ್ವಿಯಾಗಿ ಕಂಡಿತಾ ಅನ್ನೋದು ತಿಳಿದುಬಂದಿಲ್ಲ.

Leave A Reply

Your email address will not be published.