ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಸದಾ ವಾಗ್ದಾಳಿ ನಡೆಸುವ ಬಿಜೆಪಿಯ ಸಂಸದ ತೇಜಸ್ವಿ ಸೂರ್ಯ ಅವರ ಹೆಸರನ್ನು ತೋಟಗಾರಿಕೆ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಅವರು ತಮ್ಮ ಕ್ಷೇತ್ರದ ಮಗುವೊಂದಕ್ಕೆ ಇಟ್ಟಿದ್ದಾರೆ. ಹೌದು. ಶಾಮನೂರು ಶಿವಶಂಕರಪ್ಪ ಅವರ ಪುತ್ರ ಹಾಗೂ ತೋಟಗಾರಿಕಾ ಸಚಿವ ಶಾಮನೂರು ಶಿವಶಂಕರಪ್ಪ ಮಲ್ಲಿಕಾರ್ಜುನ ಸೋಮವಾರ ದಾವಣಗೆರೆಯಲ್ಲಿ ಇಂದ್ರಧನುಶ್ ಲಸಿಕಾ ಅಭಿಯಾನ 5.0ಗೆ ಚಾಲನೆ ನೀಡಿದರು. ಈ ವೇಳೆ ವಿಶೇಷವಾದ ಪ್ರಸಂಗ ನಡೆದಿದೆ. ದಾವಣಗೆರೆಯಲ್ಲಿ ಇಂದ್ರಧನುಷ್ ಲಸಿಕೆ ಹಾಕಿದ ನಂತರ ಸಚಿವ ಎಸ್ಎಸ್ ಮಲ್ಲಿಕಾರ್ಜುನ ಅವರು ಮಗುವಿಗೆ ಕೆನ್ನೆಗೆ ಮುತ್ತಿಕ್ಕಿದರು. ಈ ವೇಳೆ ಮಗುವಿನ ಪೋಷಕರು, ತಮ್ಮ ಮಗುವಿಗೆ ಹೆಸರಿಡುವಂತೆ ಸಚಿವರನ್ನು ಕೇಳಿಕೊಂಡಿದ್ದಾರೆ. ಆಗ ಮಗುವನ್ನು ಎತ್ತಿಕೊಂಡ ಮಲ್ಲಿಕಾರ್ಜುನ್ ಮಗುವಿನ ಕಿವಿಯಲ್ಲಿ ತೇಜಸ್ವಿ ಸೂರ್ಯ… ತೇಜಸ್ವಿ ಸೂರ್ಯ.. ತೇಜಸ್ವಿ ಸೂರ್ಯ ಎಂದು ಗುನುಗಿದ್ದಾರೆ. ಮಗುವಿಗೆ ಹೆಸರಿಡುವ ವೇಳೆ ಸಚಿವರಿಗೆ ತೇಜಸ್ವಿ ಸೂರ್ಯ ನೆನಪಾದ್ರಾ? ಅಥವಾ ಮಗುವಿನ ಮುಖ ಸೂರ್ಯನಂತೆ ತೇಜಸ್ವಿಯಾಗಿ ಕಂಡಿತಾ ಅನ್ನೋದು ತಿಳಿದುಬಂದಿಲ್ಲ.
[vc_row][vc_column]
BREAKING NEWS
- ವೀರಶೈವ ಲಿಂಗಾಯತರು ಸ್ವಯಂ ಉದ್ಯೋಗ, ಶೈಕ್ಷಣಿಕ, ಕಾರು ಖರೀದಿ ಸಾಲಕ್ಕೆ ಅರ್ಜಿ ಆಹ್ವಾನ.!
- ಕರ್ನಾಟಕ ಡಿ.ಎಸ್.ಟಿ. ಪಿ.ಹೆಚ್.ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
- ಉದ್ಯಮಶೀಲತಾ ಅಭಿವೃದ್ದಿ ತರಬೇತಿ ಕಾರ್ಯಕ್ರಮ.!
- ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ರಾಷ್ಟ್ರಮಟ್ಟದಲ್ಲಿ 2ನೇ ಬಹುಮಾನ- ಡಿ. ಸುಧಾಕರ್
- ಮಾರಕ ಕಾಯಿಲೆ ಡೆಂಗ್ಯೂ ಬಗ್ಗೆ ಈ ಲಕ್ಷಣಗಳು ಕಂಡುಬಂದರೆ.?
- ಈ ಕಾರಣಕ್ಕೆ ಈ ಪರ್ವತ ಚಾರಣಕ್ಕೆ ನಿಷೇಧ.. !
- ಇಂದು ಮತ್ತೊಮ್ಮೆ ಎಮರ್ಜೆನ್ಸಿ ಅಲರ್ಟ್.. ! ಏನದು.?
- ಪುಷ್ಪಗಳಿಂದ ಶತ್ರುನಾಶ ತಂತ್ರ ಈ ಒಂದೇ ಒಂದು ಪುಷ್ಪದಿಂದ ಎಂತಹ ಶತ್ರು ಇದ್ದರೂ ಕೂಡ ನಾಶ ಮಾಡಿ ನಿಮ್ಮಂತೆ ಶರಣಾಗತಿಯಾಗುವತರ ಮಾಡಬಹುದು!
- — –ದಾಸೋಹದ ಸಂಗಣ್ಣ ಅವರ ವಚನ .!
- ನೇಪಾಳದಲ್ಲಿ ಭೂಕಂಪನ: ದೆಹಲಿ, ಎನ್ ಸಿಆರ್ ನಲ್ಲೂ ಕಂಪಿಸಿದ ಭೂಮಿ