Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಈದ್ಗಾ ಮೈದಾನ ಮುಸ್ಲಿಮರ ಜಾಗವಲ್ಲ ವಿವಾದ ಮಾಡಬಾರದು – ಕೇಂದ್ರ ಸಚಿವ ಜೋಶಿ

0

ಹುಬ್ಬಳ್ಳಿ ; ಗಣೇಶ ಹಬ್ಬ ನಮ್ಮ‌ ಭಾಗದಲ್ಲಿ ವಿಜೃಂಭಣೆಯಿಂದ ಮಾಡುತ್ತೇವೆ. ಡಿಜೆ ಸೇರಿದಂತೆ ಯಾವುದೇ ನಿರ್ಬಂಧ ಹೇರಬಾರದು. ಹುಬ್ಬಳ್ಳಿಯ ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿ. ಕಳೆದ ಬಾರಿ‌ ಗಣೇಶ ಕೂರಿಸಿದ್ದೇವೆ. ಈದ್ಗಾ ಮೈದಾನ ಮುಸ್ಲಿಮರ ಜಾಗವಲ್ಲ, ಅವರು ವಿವಾದ ಮಾಡಬಾರದು. ಅವರಿಗೂ ವರ್ಷದಲ್ಲಿ ಎರಡು ಬಾರಿ ನಮಾಜ್‌ಗೆ ಅವಕಾಶವಿದೆ. ಈ ಕುರಿತು ಮಹಾನಗರ ಪಾಲಿಕೆ ಸೂಕ್ತ ತೀರ್ಮಾನ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಬಾಂಬೆ ಬಾಯ್ಸ್ ಕಾಂಗ್ರೆಸ್ ಸೇರ್ಪಡೆ ವಿಚಾರ, ಸದ್ಯದ‌ ಮಟ್ಟಿಗೆ ನನಗೆ ಹೆಚ್ಚಿನ ಮಾಹಿತಿಯಿಲ್ಲ. ಈ ಬಗ್ಗೆ ರಾಜ್ಯಾಧ್ಯಕ್ಷರಿಗೆ ಮಾತಾಡಿದ್ದೇನೆ. ಆ ರೀತಿ ಯಾವುದೇ ಬೆಳವಣಿಗೆ ಆಗಿಲ್ಲ ಎಂದಿದ್ದಾರೆ. ಸೋಮಶೇಖರ್, ಹೆಬ್ಬಾರ್ ಪಕ್ಷ ಬಿಟ್ಟು ಹೋಗಲ್ಲ ಎಂದಿದ್ದಾರೆ. ನಾಳೆ ಏನಾಗುತ್ತೆ ಅಂತಾ ಹೇಳಲು ನಾನು ಭವಿಷ್ಯಗಾರ ಅಲ್ಲ. ನನಗೆ ಇರುವ ಮಾಹಿತಿ ಪ್ರಕಾರ ಯಾರೂ ಬಿಜೆಪಿ ಬಿಟ್ಟು ಹೋಗಲ್ಲ. ಮುನೇನಕೊಪ್ಪ ಕೂಡ ನನ್ನೊಂದಿಗೆ ಮಾತನಾಡಿದ್ದು, ಅವರು ಪಕ್ಷ ತೊರೆಯಲ್ಲ ಅಂದಿದ್ದಾರೆ. ಇನ್ನು, ಲೋಕಸಭಾ ಚುನಾವಣೆಯಲ್ಲಿ ನಾನು ಧಾರವಾಡದಿಂದಲೇ ಸ್ಪರ್ಧಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

Leave A Reply

Your email address will not be published.