Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

‘ಈ ದೇಶದಲ್ಲಿ ಕಾಂಗ್ರೆಸ್‌‌ಗೆ ಭವಿಷ್ಯ ಇಲ್ಲ’- ಕೆ.ಎಸ್.ಈಶ್ವರಪ್ಪ

0

ಶಿವಮೊಗ್ಗ: ಈ ದೇಶದಲ್ಲಿ ಕಾಂಗ್ರೆಸ್ ಗೆ ಭವಿಷ್ಯ ಇಲ್ಲ. ಈಗಾಗಿ ಎಲ್ಲಾ ನಾಯಕರು ಬಿಜೆಪಿಗೆ ಬರುತ್ತಾರೆ ಎಂದು ಮಾಜಿ‌ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭಾರಿ ದೊಡ್ಡ ಸುದ್ದಿ ಮಾಡುತ್ತಿದ್ದು, ಬಿಜೆಪಿ ಒಪ್ಪಿಗೆ ಕೊಟ್ಟರೆ ಅರ್ಧ ಶಾಸಕರು ನಮ್ಮ ಪಕ್ಷಕ್ಕೆ ಬರುತ್ತಾರೆ ಎನ್ನುತ್ತಿದ್ದಾರೆ. ಆದರೆ ಒಬ್ಬನೇ ಒಬ್ಬ ಶಾಸಕ ಕಾಂಗ್ರೆಸ್ ಗೆ ಹೋಗಿಲ್ಲ. ಪಾರ್ಲಿಮೆಂಟ್ ಚುನಾವಣೆ ಹಿಂದೆ ಅಥವಾ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವೇ ಇರಲ್ಲ ಎಂದರು.

ಇನ್ನು 17 ಜನ ಶಾಸಕರು ಸಮಾಧಾನ ಇಲ್ಲವೆಂದು ನಮ್ಮ ಪಕ್ಷಕ್ಕೆ ‌ಬಂದರು. ರಾಯರೆಡ್ಡಿ ಅವರು ಯಾರೋ ಪಕ್ಷ ಕಟ್ಟಿದ್ದರು, ಯಾರೋ ಅಧಿಕಾರಕ್ಕೆ ಬಂದರು ಅಂದಿದ್ದಾರೆ. ಮುನಿಯಪ್ಪನವರು ಎಲ್ಲಾ ಹಿರಿಯರು ರಾಜೀನಾಮೆ ಕೊಡಬೇಕು ಎಂದಿದ್ದಾರೆ. ಹೀಗಾದ್ರೆ ಸರಕಾರ ಉಳಿಯುತ್ತದಾ. ಎಂ.ಬಿ.ಪಾಟೀಲ್ ಅವರು‌ ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ ಎನ್ನುತ್ತಾರೆ ಎಂದಿದ್ದಾರೆ.

Leave A Reply

Your email address will not be published.