ಉಡುಪಿ: ನಾಗರ ಪಂಚಮಿ ಹಬ್ಬದ ಸಂಭ್ರಮ ಇದೇ ವೇಳೆ ಕಾಪುವಿನಲ್ಲಿ ಜೀವಂತ ಹಾವಿಗೆ ಪೂಜೆ, ಜಲಾಭಿಷೇಕ ನಡೆದಿದ್ದು ಭಕ್ತರು ಪುಳಕಗೊಂಡಿದ್ದಾರೆ. ಕಾಪು ತಾಲೂಕಿನ ಮಜೂರಿನಲ್ಲಿರುವ ಗೋವರ್ಧನ ಭಟ್ ಮನೆಯಲ್ಲಿ ಈ ಪೂಜೆ ನಡೆಯಿತು. ಕಳೆದ 20 ವರ್ಷಗಳಿಂದ ಅಪಘಾತದಿಂದ ಗಾಯಗೊಂಡ ನಾಗರ ಹಾವುಗಳ ರಕ್ಷಣೆ ಮಾಡುತ್ತಿರುವ ಭಟ್ , ಅವುಗಳಿಗೆ ಆರೈಕೆ ಮಾಡಿ ಕಾಡಿಗೆ ಬಿಡುತ್ತಿದ್ದಾರೆ. ಇವತ್ತು ತಮ್ಮ ಆರೈಕೆಯಿಂದ ಗಾಯಗೊಂಡು ಗುಣಮುಖವಾದ ನಾಗರಹಾವಿಗೆ ಭಟ್ಟರ ಮನೆಯಲ್ಲಿ ಜಲಾಭಿಷೇಕ ಮಾಡಿ, ದೀಪ ಬೆಳಗಲಾಯಿತು. ಗೋವರ್ಧನ ಭಟ್ ಅವರು ಕಾಪು ಭಾಗದಲ್ಲಿ ನಾಗರ ಹಾವಿನ ವೈದ್ಯರೆಂದೇ ಪ್ರಸಿದ್ದಿ ಪಡೆದಿದ್ದಾರೆ.
[vc_row][vc_column]
BREAKING NEWS
- ‘ಕಾಂಗ್ರೆಸ್ ಪಕ್ಷ ತುಕ್ಕುಹಿಡಿದ ಕಬ್ಬಿಣವಾಗಿದೆ’ – ಮೋದಿ
- ‘ನೈತಿಕ ದಿವಾಳಿತನದ ಸಾರಾಯಿ ಗ್ಯಾರೆಂಟಿ ಸರ್ಕಾರ’ – ಬೊಮ್ಮಾಯಿ ಕಿಡಿ
- ‘ಸಂಪುಟ ಸಭೆಯಲ್ಲಿ ಮೋಡ ಬಿತ್ತನೆಗೆ ಚರ್ಚೆ’: ಡಿಸಿಎಂ ಡಿ.ಕೆ.ಶಿವಕುಮಾರ್
- ನಿಯಮ ಉಲ್ಲಂಘನೆ ಮಾಡಿಯೂ ಟ್ರಾಫಿಕ್ ಪೊಲೀಸರಿಗೆ ಯುವತಿಯಿಂದ ಅವಾಜ್!
- ‘ಕಾವೇರಿ ನೆಪದಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜಕೀಯ ಮಾಡುತ್ತಿದೆ’- ಸಿದ್ದರಾಮಯ್ಯ
- ಭಾರತೀಯ ವಾಯುಪಡೆಗೆ C-295 ಸರಕು ವಿಮಾನ ಸೇರ್ಪಡೆ
- ವಿಶಾಖಪಟ್ಟಣಂ ಮೃಗಾಲಯದಲ್ಲಿ 18 ವರ್ಷದ ಸಿಂಹಿಣಿ ಹೃದಯಾಘಾತದಿಂದ ಸಾವು
- ‘ಶಾಂತಿಯುತ ಹೋರಾಟಕ್ಕೆ ಸರ್ಕಾರ ಅಡಚಣೆ ಮಾಡಲ್ಲ’: ಡಿಕೆಶಿ
- ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ
- ಇಂದು ಮೊದಲ ಬಾರಿಗೆ ಇಡೀ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”