Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಉಡುಪಿ : ಮಾಜಿ ಶಾಸಕ ಯು. ಆರ್ ಸಭಾಪತಿ ನಿಧನ

0

ಉಡುಪಿ : ಉಡುಪಿ ಜಿಲ್ಲೆಯ ಹಿರಿಯ ರಾಜಕಾರಣಿ ಮಾಜಿ ಶಾಸಕ ಯು.ಆರ್ ಸಭಾಪತಿ ಇಂದು ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.

ಉಡುಪಿ ಬಡಗುಪೇಟೆ ನಿವಾಸಿಯಾಗಿದ್ದ ಅವರು ಜಿಲ್ಲೆಯ ರಾಜಕೀಯ ಕ್ಷೇತ್ರದಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು. 1952 ರಲ್ಲಿ ಹುಟ್ಟಿದ ಅವರು,1994 ರಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ(ಕೆಸಿಪಿ) ಚುನಾಯಿತರಾಗಿ ವಿಧಾನಸಭೆ ಪ್ರವೇಶಿಸಿದ್ದರು. ಅನಂತರ ಕೆಸಿಪಿ ಕಾಂಗ್ರೆಸ್ ನೊಂದಿಗೆ ವಿಲೀನಗೊಂಡಿತ್ತು. 1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಎಂಎಲ್ ಎ ಆಗಿ ಮರು ಆಯ್ಕೆಯಾಗಿದ್ದರು. ಅನಂತರ ಜಿಲ್ಲೆಯ ರಾಜಕಾರಣದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

Leave A Reply

Your email address will not be published.