Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಉಡುಪಿ ವಿಡಿಯೋ ಪ್ರಕರಣ: ಡಾ. ಜಿ ಪರಮೇಶ್ವರ್ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ ಯತ್ನ

0

ಬೆಂಗಳೂರು: ಉಡುಪಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ್ದ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ನಿವಾಸಕ್ಕೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು.ಸದಾಶಿವನಗರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ನಂತರ ಪೊಲೀಸರು‌ ವಶಕ್ಕೆ ಪಡೆದುಕೊಂಡರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಉಡುಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ಹೇಳಿಕೆ ಬೇಜವಾಬ್ದಾರಿತನದ್ದು ಎಂದು ಆರೋಪಿಸಿದರು. ಕಾಂಗ್ರೆಸ್ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.ಉಡುಪಿ ಕಾಲೇಜಿನಲ್ಲಿ ವಿಡಿಯೋ ಪ್ರಕರಣದ ವಿರುದ್ಧ ಬೀದಿಗಿಳಿದ ಬಿಜೆಪಿ ಮಹಿಳಾ ಮೋರ್ಚಾ: ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ

ಮುತ್ತಿಗೆ ವಿಚಾರವಾಗಿ ಬಳಿಕ ಮಾತನಾಡಿದ ಡಾ.‌ಜಿ ಪರಮೇಶ್ವರ್,ನಾನು, ನೀವು ಕಾಲೇಜು ಹೋಗಿದ್ದವರು. ಸ್ನೇಹಿತರ ನಡುವೆ ಕೆಲ ಘಟನೆ ನಡೆಯುತ್ತೆ. ಅದನ್ನು ಎಲ್ಲಿಗೋ ತೆಗೆದುಕೊಂಡು ಹೋಗುವುದು ಸರಿಯಲ್ಲ ಎಂದರು. ಇಂತಹ ಘಟನೆ ನಡೆದರೆ ಅದರ ವಿರುದ್ಧ ಏನು ಕ್ರಮ ಕೈಗೊಳ್ಳಬೇಕು ಎಂಬುದುನ್ನು ಕಾಲೇಜಿನ ಪ್ರಾಂಶುಪಾಲರಿಗೆ ಬಿಡಬೇಕು. ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಈಗಾಗಲೇ ಅಮಾನತು ಮಾಡಿದ್ದಾರೆ. ಅದನ್ನು ಮೀರಿದ ಘಟನೆಯಾದ್ರೆ ನಾವು ಮಧ್ಯಪ್ರದೇಶ ಮಾಡಬಹುದು ಎಂದರು‌.ವಿವಿ ಮಟ್ಟದಲ್ಲಿ ರ್ಯಾಗಿಂಗ್ ವಿರೋಧಿ ಸಮಿತಿ ಇದೆ. ಅಲ್ಲಿ‌ ಅದನ್ನು ನಿಭಾಯಿಸಲಾಗುತ್ತದೆ. ಹಾಗಿದ್ದರೂ ಪೊಲೀಸರು ಸತ್ಯಾಸತ್ಯತೆ ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ. ನಾನೂ ಕೂಡ ಸತ್ಯಾಸತ್ಯತೆ ತಿಳಿಯಲು ಸೂಚಿಸಿದ್ದೇನೆ ಎಂದರು.ಬಿಜೆಪಿ ಪ್ರತಿಭಟನೆ, ಸಿಬಿಐ ತನಿಖೆಗೆ ಒತ್ತಾಯಉಡುಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಹಿಳಾ ಮೋರ್ಚಾ ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಡಾ. ಅಶ್ವತ್ಥ ನಾರಾಯಣ, ಉಡುಪಿ ಪ್ರಕರಣದ ಹಿಂದೆ ಲವ್ ಜಿಹಾದ್ ಇದೆ. ಈ ಹಿನ್ನಲೆಯಲ್ಲಿ ಪ್ರಕರಣವನ್ನು ಎನ್ ಐ ಎ ಅಥವಾ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Leave A Reply

Your email address will not be published.