Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಉಳ್ಳಾಲದಲ್ಲಿ ಆಯತಪ್ಪಿ ಹೊಳೆಗೆ ಬಿದ್ದು ವ್ಯಕ್ತಿ ಸಾವು

0

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾರ್ಭಟ ಮುಂದುವರೆದಿದ್ದು ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ‌ ಪಿಲಾರು ಎಂಬಲ್ಲಿ ಮನೆ ಸಂಪರ್ಕದ ಮೋರಿ‌ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯ ತಪ್ಪಿ ಬಿದ್ದು ಹೊಳೆಗೆ ಬಿದ್ದು ಮಳೆ ನೀರಿಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ‌(52)ಮೃತ ವ್ಯಕ್ತಿಯಾಗಿದ್ದಾರೆ.

ಸುರೇಶ್ ಗಟ್ಟಿ ಅವರು ವೃತ್ತಿಯಲ್ಲಿ ಪೈಂಟರ್ ಆಗಿದ್ದು ಕೆಲಸ ಮುಗಿಸಿ ಮಂಗಳವಾರ ಸಂಜೆ ಮನೆಗೆ ಹಿಂದಿರುಗಿದ್ದ ವೇಳೆ ಮನೆ ಸಂಪರ್ಕದ ಮೋರಿ ದಾಟುತ್ತಿದ್ದ ವೇಳೆ ಕಾಲು ಜಾರಿ ಮೋರಿಗೆ ಬಿದ್ದು ಧಾರಾಕಾರ ಸುರಿಯುತ್ತಿದ್ದ ಮಳೆ ನೀರಲ್ಲಿ ಮುಳುಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಪ್ರತಿಭಾ ಕಾರಂಜಿಯಲ್ಲಿ ಭೂತದ ಕೋಲಕ್ಕೆ ಅವಕಾಶ -ವಿವಾದಕ್ಕೆ ಕಾರಣವಾದ ಶಿಕ್ಷಣ ಇಲಾಖೆಯ ಸುತ್ತೋಲೆ ..!

ಮೋರಿಯಲ್ಲಿ ಬಿದ್ದಿದ್ದ ಸುರೇಶ್ ಅವರನ್ನ ಪಕ್ಕದ ಮನೆಯ ಮಾಜಿ ಸೋಮೇಶ್ವರ ಗ್ರಾಮ ಪಂಚಾಯತ್ ಸದಸ್ಯ ಪ್ರೇಮಾನಂದ ಮತ್ತು ಅವರ ಸಂಬಂಧಿ ಧನರಾಜ್ ಅವರು ಮೇಲಕ್ಕೆತ್ತಿ ಆಸ್ಪತ್ರೆ ಸಾಗಿಸುವಾಗಲೇ ಸುರೇಶ್ ಅವರು ಮೃತ ಪಟ್ಟಿದ್ದಾರೆ.

ಮೃತ ಸುರೇಶ್ ಅವರ ಪತ್ನಿ ಬೀಡಿ ಕಟ್ಟುತ್ತಿದ್ದು,ಹಿರಿಯ ಮಗಳಿಗೆ ಇತ್ತೀಚಿಗಷ್ಟೆ ಮದುವೆ ಆಗಿತ್ತು.ಕಿರಿಯ ಮಗಳು ಅವಿವಾಹಿತಳಾಗಿದ್ದು ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ ತಂದೆಯೇ ಅಕಾಲಿಕ ಮರಣವನ್ನಪ್ಪಿದ್ದು ಬಡ ಅಶಕ್ತ ಕುಟುಂಬಕ್ಕೆ ದಿಕ್ಕೇ ಕಾಣದಂತಾಗಿದೆ.

Leave A Reply

Your email address will not be published.