Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಎಡಗೈ ನೋವಿನಿಂದ ಬಳಲುತ್ತಿರುವ ಸಿದ್ದರಾಮಯ್ಯ: ನಿವಾಸಕ್ಕೆ ಆಗಮಿಸಿದ ವೈದ್ಯರು

0

ಬೆಂಗಳೂರು: ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೆ ಕೈನೋವು ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಶಿವಾನಂದ ವೃತ್ತದ ಬಳಿಯಿರುವ ಸರ್ಕಾರಿ ನಿವಾಸಕ್ಕೆ ಕುಟುಂಬದ ವೈದ್ಯರು ದೌಡಾಯಿಸಿದ್ದಾರೆ.

ಟ್ವಿಟ್ಟರ್‌ಗೆ ನೂತನ ಮಹಿಳಾ ಸಿಇಒ ನೇಮಿಸಿದ ಎಲಾನ್‌ ಮಸ್ಕ್‌

ಸಿದ್ದರಾಮಯ್ಯ ಅವರ ಕುಟುಂಬದ ವೈದ್ಯ ರವಿಕುಮಾರ್ ಆಗಮಿಸಿ ತಪಾಸಣೆ ನಡೆಸಿದ್ದಾರೆ. ನಿರಂತರ ಪ್ರಚಾರ, ಜನರ ನಡುವೆ ಓಡಾಟ ನಡೆಸಿದ್ದಕ್ಕೆ, ಎಡಗೈಯಲ್ಲಿ ನೋವು ಕಾಣಿಸಿಕೊಂಡಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತಾಡಿದ ವೈದ್ಯ ರವಿಕುಮಾರ್, ಸಿದ್ದರಾಮಯ್ಯರ ಕೈ ಊತ ಈಗ ಸ್ವಲ್ಪ ಕಡಿಮೆಯಾಗಿದೆ. ಪೂರ್ಣ ಊತ ಕಡಿಮೆಯಾಗಲು ಕೆಲವು ದಿನಗಳು ಬೇಕು. ಹಾಗಾಗಿ ಎರಡು ವಾರ ವಿಶ್ರಾಂತಿ ಪಡೆಯಬೇಕು. ಇದನ್ನು ಹೊರತುಪಡಿಸಿ ಆರೋಗ್ಯವಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಸಿದ್ದರಾಮಯ್ಯ ಕೊಪ್ಪಳ ಚುನಾವಣಾ ಪ್ರಚಾರದಲ್ಲಿದ್ದಾಗ ನೂಕು-ನುಗ್ಗಲು ಉಂಟಾಗಿತ್ತು. ಈ ವೇಳೆ ಸಿದ್ದರಾಮಯ್ಯರ ಕೈಗೆ ಗಾಯವಾಗಿತ್ತು. ಕೈ ಗಾಯದ ನಡುವೆಯೂ ಸಿದ್ದರಾಮಯ್ಯ ಅಬ್ಬರದ ಪ್ರಚಾರದ ನಡೆಸಿದ್ದರು.

Leave A Reply

Your email address will not be published.