ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.
ವಚನ: :
ಎನ್ನ ಕನ್ನಡಿ ಒಳ ಹೊರಗಿಲ್ಲ.
ಎನ್ನ ಘಳಿಹ ಮುಟ್ಟನೊಳಕೊಂಡ
ಚಿರ ಹಡಪಕ್ಕೆ ಅಳವಲ್ಲ.
ಕತ್ತಿಯ ಬಸವಣ್ಣ ಕೊಟ್ಟ.
ಕತ್ತರಿಯ ಚೆನ್ನಬಸವಣ್ಣ ಕೊಟ್ಟ.
ಕಿತ್ತುಹಾಕುವ ಚಿಮ್ಮಟಿಕೆಯ ಪ್ರಭುರಾಯ ಕೂಟ್ಟ.
ಮಿಕ್ಕಾದ ಎನ್ನಯ ಮುಟ್ಟ ಸತ್ಯಶರಣರು ಕೊಟ್ಟರು.
ದೃಷ್ಟವ ತೋರಿ ಅಡಗುವ ಮುಕುರವ ಕೊಟ್ಟವರ ಹೇಳುವೆನು
ದೃಷ್ಟ ಪ್ರಸಿದ್ಧ ಆಪ್ರತಿಮ ಪ್ರಸನ್ನ
ಚೆನ್ನಬಸವಣ್ಣ ಪ್ರಿಯ ಕಮಳೇಶ್ವರಲಿಂಗವುಎನಗೆ ದೃಷ್ಟವ ಕೊಟ್ಟು ತಾ ಬೆಳಗಿನೊಳಗಾದ!
-ಕನ್ನಡಿಕಾಯಕದ ಅಮ್ಮಿದೇವಯ್ಯ