ಬೆಂಗಳೂರು: ಕಾಂಗ್ರೆಸ್ನ ಭರ್ಜರಿ ಗೆಲುವಿನಲ್ಲಿ ಈ ಗ್ಯಾರಂಟಿಗಳು ಕೂಡ ಪ್ರಮುಖ ಪಾತ್ರವಹಿಸಿವೆ. ಐದು ಗ್ಯಾರಂಟಿಗಳನ್ನು ಯಾವ ರೀತಿ ಈಡೇರಿಸುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಇದರ ನಡುವೆಯೇ ಇನ್ನೊಂದು ಗ್ಯಾರಂಟಿಯನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಆದರೆ, ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಘೋಷಣೆಯಾಗಿಲ್ಲ. ಬದಲಾಗಿ ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಪ್ರಿಯಾಂಕ ಖರ್ಗೆ ಅವರಿಂದ 6ನೇ ಗ್ಯಾರಂಟಿ ಘೋಷಣೆಯಾಗಿದೆ. ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎಂಟು ಸಚಿವ ಪದಗ್ರಹಣ ಸಮಾರಂಭ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿದೆ. ಪ್ರಿಯಾಂಕ ಖರ್ಗೆ ಅವರಿಗೂ ಸಚಿವ ಸ್ಥಾನ ದೊರೆತಿದೆ. ಹೀಗಾಗಿ ಪ್ರಮಾಣವಚನ ಸ್ವೀಕರಿಸಲು ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದು, ಅದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ ಆರನೇ ಗ್ಯಾರಂಟಿ ಘೋಷಣೆ ಮಾಡಿದರು. ಯಾವುದು ಆ ಗ್ಯಾರಂಟಿ ಎಂದರೆ, ಪಿಎಸ್ಐ ಹಾಗೂ ಬಿಟ್ಕಾಯಿನ್ ಹಗರಣಗಳಿಗೆ ತಾರ್ಕಿಕ ಅಂತ್ಯವನ್ನು ಕಾಂಗ್ರೆಸ್ ನೀಡಲಿದೆಯಂತೆ. ಇದು ನನ್ನ ಆರನೇ ಭರವಸೆ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಬಿಜೆಪಿ ಸರ್ಕಾರದ ಹಗರಣಗಳ ಆರೋಪಿಗಳಿಗೆ ಶಿಕ್ಷೆ ನೀಡಿಸಲಾಗುವುದು. ಎರಡು ಪ್ರಕರಣಗಳನ್ನು ಲಾಜಿಕ್ ಎಂಡ್ಗೆ ತೆಗೆದುಕೊಂಡು ಹೋಗಲಾಗುವುದು ಎಂದು ಪ್ರಿಯಾಂಕ ಖರ್ಗೆ ಭರವಸೆ ನೀಡಿದ್ದಾರೆ.
[vc_row][vc_column]
BREAKING NEWS
- ‘ಕಟೀಲ್, ಬೊಮ್ಮಾಯಿ ಅವರೇ ನಿಮ್ಮ ಮನೆಗೂ ಕರೆಂಟ್ ಫ್ರೀ’ ಎಂದ ಕಾಂಗ್ರೆಸ್!
- 2022-23ನೇ ಸಾಲಿನಲ್ಲಿ ಪದವಿ ಪಡೆದ ನಿರುದ್ಯೋಗಿ ಯುವಕ- ಯುವತಿಯರಿಗೆ ‘ಯುವನಿಧಿ’ ಭಾಗ್ಯ ಜಾರಿ ಮಾಡಿದ ಸಿದ್ದು ಸರ್ಕಾರ
- ಮಂಗಳೂರು: ನಗರಾಭಿವೃದ್ದಿ ಪ್ರಾಧಿಕಾರದ ಸಿಬ್ಬಂದಿ ಆತ್ಮಹತ್ಯೆ
- ಗೃಹಲಕ್ಷ್ಮಿ ಯೋಜನೆ: ಅರ್ಜಿ ಸಲ್ಲಿಸುವುದು ಹೇಗೆ? ಬೇಕಾದ ದಾಖಲೆಗಳೇನು? ಕೊನೆ ದಿನಾಂಕದ ಮಾಹಿತಿ
- ಉಚಿತ ಬಸ್ ಯೋಜನೆ – ಜೂನ್ 11 ರಿಂದ ಉಚಿತ ಬಸ್ ಪ್ರಯಾಣ
- ಗ್ಯಾರೆಂಟ್ ಜಾರಿ: ಜು.1ರಿಂದ 200 ಯುನಿಟ್ ಉಚಿತ ವಿದ್ಯುತ್, ಎಪಿಎಲ್ ಗೂ ಗೃಹಲಕ್ಷ್ಮಿ
- ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟ ಪ್ರಕರಣ: ಅಪರಾಧಿ ಆದಿತ್ಯ ರಾವ್ ನಿಂದ ಜೈಲಿನಲ್ಲಿ ದಾಂಧಲೆ..!
- ಈ ಆರ್ಥಿಕ ವರ್ಷದಲ್ಲಿ ಎಲ್ಲಾ ಐದೂ ಗ್ಯಾರಂಟಿ ಜಾರಿ: ಷರತ್ತು ಅನ್ವಯ- ಸಿಎಂ
- ಕಡಬ: ಮನೆ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು
- ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ತನಿಖೆ ತಡೆಯಾಜ್ಞೆ ವಿಸ್ತರಣೆ