Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

‘ಕಾಂಗ್ರೆಸ್ ಸರಕಾರ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ’ – ಎಚ್‌‌ಡಿ.ಕುಮಾರಸ್ವಾಮಿ ಆಕ್ರೋಶ

0

ಬೆಂಗಳೂರು: ಕಾಂಗ್ರೆಸ್ ಸರಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ ಎಂದು ಸರ್ಕಾರದ ವಿರುದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿರುವ ಅವರು, ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿ, ಕನ್ನಡಿಗರ ತಲೆ ಮೇಲೆ ಮಕ್ಮಲ್ ಟೋಪಿ ಇಟ್ಟ ಕಾಂಗ್ರೆಸ್, ಈಗ I.N.D.I.A.ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ ಎಂದರು.

ಇನ್ನು ಮಳೆ ಅಭಾವದಿಂದ ಜಲಾಶಯಗಳು ತುಂಬಿಲ್ಲ. ರೈತರ ಬೆಳೆಗೆ ನೀರಿಲ್ಲ, ಬೆಂಗಳೂರಿಗೆ ಕುಡಿಯುವ ನೀರಿಗೂ ತತ್ವಾರ. ನಮ್ಮ ಹೊಟ್ಟೆಗೇ ಹಿಟ್ಟಿಲ್ಲ, ನೆರೆಮನೆಯವರ ಜುಟ್ಟಿಗೆ ಮಲ್ಲಿಗೆ ಮುಡಿಸಲು ಹೊರಟಿದೆ ಸರಕಾರ. ಕನ್ನಡಿಗರಿಗೆ ವಂಚಿಸಿ ರಾಜಾರೋಷವಾಗಿ ನೀರು ಹರಿಸುವ ಮೂಲಕ ತಮಿಳುನಾಡು ಜತೆ ರಾಜಕೀಯ ಚೌಕಾಬಾರ ಆಡುತ್ತಿದೆ! ಇದೇನು ಇನ್ನೊಂದು ಗ್ಯಾರಂಟಿನಾ? ಎಂದು ಪ್ರಶ್ನಿಸಿದ್ದಾರೆ.

Leave A Reply

Your email address will not be published.