Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಕಾನೂನು ಬಾಹಿರ ಕೆಲಸಕ್ಕಾಗಿ ಬಜರಂಗದಳ ಕಾರ್ಯಕರ್ತರಿಗೆ ನೋಟಿಸ್‌: ಗುಂಡೂರಾವ್‌

0

ಮಂಗಳೂರು: ಮಂಗಳೂರಿನ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ವಿಚಾರಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂ ರಾವ್‌ ಪ್ರತಿಕ್ರಿಯೆ ನೀಡಿದ್ದಾರೆ. ಬಜರಂಗದಳ ಕಾರ್ಯಕರ್ತರ ಮೇಲೆ ಅನೇಕ ಪ್ರಕರಣಗಳಿವೆ. ಕಾನೂನು ಬಾಹಿರ ಚಟುವಟಿಕೆ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ನೋಟಿಸ್‌ ನೀಡಲಾಗಿದೆ. ಇದರಲ್ಲಿ ಜಾತಿ, ಧರ್ಮ ನೋಡುವ ಪ್ರಶ್ನೆಯೇ ಇಲ್ಲ. ಇಂತಹ ವ್ಯಕ್ತಿಗಳ ವಿರುದ್ಧ ಬಿಜೆಪಿ ಬಿಜೆಪಿಯವರು ವಕಾಲತ್ತು ವಹಿಸುತ್ತಾರೆ ಎಂದರೆ ಅದಕ್ಕಿಂತ ಕೆಟ್ಟ ಸಂಗತಿ ಇನ್ನೊಂದಿಲ್ಲ ಎಂದರು. ನಮ್ಮ ಪೊಲೀಸರಿಗೆ ತಪ್ಪು ಮಾಡಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದೇವೆ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವ ಅಗತ್ಯವಿಲ್ಲ. ಇದೇ ರೀತಿಯ ಅಪರಾಧ ಹಿನ್ನಲೆಯ 65 ಜನರನ್ನು ಈಗಾಗಲೇ ದ.ಕ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಪೊಲೀಸ್ ಇಲಾಖೆಯಲ್ಲಿ ನಾವು ಹಸ್ತಕ್ಷೇಪ ಮಾಡುತ್ತಿಲ್ಲ. ಪೊಲೀಸರು ನಿಷ್ಪಕ್ಷಪಾತವಾಗಿ ಡ್ರಗ್ ಮಾಫಿಯಾ, ನೈತಿಕ ಪೊಲೀಸ್ ಗಿರಿ ವಿರುದ್ದ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ನಾಯಕರು ಶಾಂತಿಯ ವಾತಾವರಣ ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Leave A Reply

Your email address will not be published.