Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಕಿರುತೆರೆ ನಟ ನಿತೇಶ್ ಪಾಂಡೆ ವಿಧಿವಶ; ಹೃದಯಾಘಾತದಿಂದ ಕೊನೆಯುಸಿರೆಳೆದ ಕಲಾವಿದ

0

ಮುಂಬೈ: ನಟಿ ವೈಭವಿ ಉಪಾಧ್ಯಾಯ ಅಪಘಾತದಲ್ಲಿ ಮೃತಪಟ್ಟ ಸುದ್ದಿಯ ಬೆನ್ನಲ್ಲೇ ಮತ್ತೋರ್ವ ಖ್ಯಾತ ನಟ ಮೃತಪಟ್ಟಿದ್ದು ಇದು ಹಿಂದಿ ಕಿರುತೆರೆಗೆ ತೀವ್ರ ಅಘಾತವನ್ನುಂಟು ಮಾಡಿದೆ.

ಟಿವಿ ದಾರಾವಾಹಿ ಲೋಕದಲ್ಲಿ ಜನಪ್ರಿಯ್ ನಟ ನಿತೇಶ್ ಪಾಂಡೆ (51) ಹೃದಯ ಸ್ತಂಭನ ಉಂಟಾಗಿ ಮುಂಬಯಿನಲ್ಲಿ ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. ಉತ್ತರಾಖಂಡದ ಅಲ್ಮೋರಾ ಕುಮಾನ್ ಮೂಲದವರಾದ ಅವರು ಕಳೆದ 25 ವರ್ಷದಿಂದ ಕಿರುತೆರೆಯಲ್ಲಿ ಕೆಲಸ ಮಾಡಿಕೊಂಡಿದ್ದರು. ಖೋಸ್ಲಾ ಕಾ ಘೋಸ್ಲಾʼದಲ್ಲಿನ ಅವರ ಅಭಿನಯ ಅಪಾರ ಜನರನ್ನು ರಂಜಿಸಿತ್ತು. ʼಅನುಪಮಾʼ ಮತ್ತು ʼಪ್ಯಾರ್ ಕಾ ದರ್ದ್ ಹೈ ಮೀಟಾ ಮೀಟಾ ಪ್ಯಾರಾ ಪ್ಯಾರಾʼ ಧಾರಾವಾಹಿಯಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದ್ದರು.

ಅತಿಥಿ ಉಪನ್ಯಾಸಕ, ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಹಾಕಿ

ಅತಿಥಿ ಉಪನ್ಯಾಸಕ, ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಹಾಕಿ

ತೇಜಸ್, ಮಂಜಿಲೀನ್ ಅಪಾನಿ ಅಪಾನಿ, ಸಾಯಾ, ಅಸ್ತಿತ್ವ ಏಕ್ ಪ್ರೇಮ್ ಕಹಾನಿ, ಜುಸ್ತಜೂ ಮತ್ತು ದುರ್ಗೇಶ್ ನಂದಿನಿಯಂತಹ ಶೋಗಳಲ್ಲಿ ಕಾಣಿಸಿಕೊಂಡರು. ಅವರು ಡ್ರೀಮ್ ಕ್ಯಾಸಲ್ ಪ್ರೊಡಕ್ಷನ್ ಹೌಸ್ ಕೂಡ ಹೊಂದಿದ್ದರು. ʼಓಂ ಶಾಂತಿ ಓಂʼ ,ʼಬದಾಯಿ ದೋʼ ಮುಂತಾದ ಸಿನಿಮಾದಲ್ಲೂ ಅವರು ನಟಿಸಿದ್ದಾರೆ. ಮೇ. 22 ರಂದು ಆದಿತ್ಯ ಸಿಂಗ್ ರಜಪೂತ್ ವಾಶ್‌ ರೂಮ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಆ ಬಳಿಕ ಅಪಘಾತದಲ್ಲಿ ನಟಿ ವೈಭವಿ ಉಪಾಧ್ಯಾಯ ಮೃತಪಟ್ಟಿದ್ದರು.

Leave A Reply

Your email address will not be published.