ವಿಜಯಪುರ : ನಗರದ ಸ್ಟೇಷನ್ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿ ಎಗ್ಗಿಲ್ಲದೇ ಕಾರು ಚಲಾಯಿಸಿದ್ದು, ಅಪಘಾತ ಮಾಡಿ ಚಾಲಕನಿಗೆ ಮಹಿಳೆಯಿಂದಲೇ ಚಪ್ಪಲಿಯಿಂದ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.
ಗುಜರಾತ್: ಮಾಜಿ ಕೃಷಿ ಸಚಿವ ವಲ್ಲಭಭಾಯಿ ವಘಾಸಿಯಾ ಅಪಘಾತದಲ್ಲಿ ಮೃತ್ಯು
ಕಂಠಪೂರ್ತಿ ಕುಡಿದು ರಸ್ತೆಗಿಳಿದ ಕಾರು ಚಾಲಕ ಎರಡು ಆಟೋ ಹಾಗೂ ಒಂದು ಬೈಕ್ಗೆ ಡಿಕ್ಕಿ ಹೊಡೆದಿದ್ದು, ಆಟೋ ಪಲ್ಟಿಹೊಡೆದಿದೆ. ಈ ವೇಳೆ ಆಟೋದಲ್ಲಿದ್ದ ಮಹಿಳೆ ಸಿಟ್ಟುಗೊಂಡು ಮದ್ಯದ ಅಮಲಿನಲ್ಲಿದ್ದ ಕಾರು ಚಾಲಕನಿಗೆ ತನ್ನ ಕಾಲಿನಲ್ಲಿದ್ದ ಚಪ್ಪಲಿಯನ್ನು ಕೈಗೆ ತೆಗೆದುಕೊಂಡು ಕಾರು ಚಾಲಕನಿಗೆ ಹಿಗ್ಗಾಮುಗ್ಗಾವಾಗಿ ಕಪಾಳಮೋಕ್ಷ ಮಾಡಿದ್ದಲ್ಲದೇ ಆಕ್ರೋಶ ವ್ಯಕ್ತಪಡಿಸಿದ್ದಾಳೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿದ್ದು, ಪೊಲೀಸರು ಕಾರು ಚಾಲಕನ್ನು ವಶಕ್ಕೆ ಪಡೆದುಕೊಂಡಿದ್ದಾರೆಎಂದು ತಿಳಿಯಲಾಗಿದೆ.