ಮಂಗಳೂರು: ಸಾಮಾಜಿಕ ಜಾಲತಾಣದ ವಾಟ್ಸಪ್, ಫೇಸ್ಬುಕ್, ಇನ್ಸಾ ಗ್ರಾಮ್, ಟ್ವಿಟ್ಟರ್ ಹಾಗೂ ಇನ್ನಿತರ ಅಪ್ಲಿಕೇಶನ್ಗಳಲ್ಲಿ ಧರ್ಮದ ವಿಚಾರ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಅಂಶಗಳನ್ನು ಒಳಗೊಂಡ ಸಂದೇಶಗಳು ಹರಿದಾಡುತ್ತಿರುವುದು ಕಂಡು ಬರುತ್ತಿದೆ. ಇಂತಹ ಸಂದೇಶಗಳಿಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈಗಾಗಲೇ 21 ಪ್ರಕರಣಗಳು ದಾಖಲಾಗಿದ್ದು ತನಿಖೆಯಲ್ಲಿರುತ್ತದೆ. ನಗರದ ಎಲ್ಲಾ ಪೊಲೀಸ್ ಠಾಣೆಗಳ ಹಾಗೂ ಸೋಷಿಯಲ್ ಮೀಡಿಯಾ ಸೆಲ್ನಲ್ಲಿ ಧರ್ಮದ ವಿಚಾರವಾಗಿ ಪರ ಮತ್ತು ವಿರೋಧ ಸಂದೇಶಗಳನ್ನು ಪೋಸ್ಟ್, ಶೇರ್ ಮತ್ತು ಕಮೆಂಟ್ ಮಾಡುವ ವ್ಯಕ್ತಿಗಳ ಮೇಲೆ ಸೂಕ್ತ ನಿಗಾ ವಹಿಸುತ್ತಿದ್ದು ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಹಾಗೂ ಇದೇ ರೀತಿಯಲ್ಲಿ ಅಪರಾಧಗಳನ್ನು ಪುನರಾವರ್ತನೆ ಮಾಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತರಾದ ಕುಲದೀಪ್ ಆರ್ ಜೈನ್ ಎಚ್ಚರಿಕೆ ನೀಡಿದ್ದಾರೆ
[vc_row][vc_column]
BREAKING NEWS
- ಉದ್ಯೋಗಿಯಿಂದ ಮಹಾನ್ ಎಡವಟ್ಟು – ಮೈಕ್ರೋಸಾಫ್ಟ್ ನ 32ಟಿಬಿ ಮಾಹಿತಿ ಸೋರಿಕೆ
- ವಂಚನೆ ಪ್ರಕರಣ – ಚೈತ್ರಾ ಸೇರಿ 7 ಮಂದಿಗೆ ಅ. 6ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ
- ನಿಂಜಾ ಪ್ರಶಸ್ತಿ ಪಡೆದ 71 ವರ್ಷದ ಮಹಿಳೆಯ ಗಿನ್ನಿಸ್ ದಾಖಲೆ!
- ಹೊಸ ಐಫೋನ್ ಖರೀದಿಗೆ ಮುಗಿಬಿದ್ದ ಜನ – ಈ ಫೋನ್ ನಲ್ಲಿ ಅಂಥಾದ್ದೇನಿದೆ?
- ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಕುರಿತ ಸ್ಪೋಟಕ ಮಾಹಿತಿ ಬಹಿರಂಗ?
- ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಚಿಕ್ಕಮಗುವನ್ನು ಬೇಟೆಯಾಡುತ್ತಿದ್ದಾರೆ -ಕಮಲ್ ಹಾಸನ್
- ಮುಂಬೈ ಜಿಎಸ್ ಬಿ ಗಣೇಶೋತ್ಸವದಲ್ಲಿ ಪಾಲ್ಗೊಂಡ ಕರಾವಳಿ ಬೆಡಗಿ ನಟಿ ಪೂಜಾ ಹೆಗ್ಡೆ
- ಎತ್ತಿನಹೊಳೆ ಯೋಜನೆ Out dated subject – ಮಾಜಿ ಸಿಎಂ ವೀರಪ್ಪ ಮೊಯಿಲಿ..!
- ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಂಬಳ – ಅಶೋಕ್ ರೈ ನೇತೃತ್ವದಲ್ಲಿ ಸ್ಥಳ ಪರಿಶೀಲನೆ
- ಮುದ್ರಾಂಕ ಇಲಾಖೆಯ ವೆಬ್ಸೈಟ್ಗೆ ಕನ್ನ – ಎಇಪಿಎಸ್ ಮೂಲಕ ಒಂದು ಲಕ್ಷ ರೂ. ವಂಚನೆ?