ಜೈಪುರ : ಮಹಾರಾಷ್ಟ್ರದ ಪಾಲ್ಘರ್ ರೈಲ್ವೆ ನಿಲ್ದಾಣದ ಬಳಿ ಚಲಿಸುತ್ತಿದ್ದ ಜೈಪುರ-ಮುಂಬೈ ಎಕ್ಸ್ಪ್ರೆಸ್ ರೈಲಿನಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಪೇದೆ ಗುಂಡು ಹಾರಿಸಿದ್ದು, ಆರ್ಪಿಎಫ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ. ಬೆಳಗಿನ ಜಾವ 5 ಗಂಟೆಯ ಸುಮಾರಿಗೆ ಜೈಪುರದಿಂದ ಮುಂಬೈಗೆ ರೈಲು ಚಲಿಸುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಪೇದೆ ಸಬ್ ಇನ್ಸ್ಪೆಕ್ಟರ್ ಜೊತೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದಾನೆ. ಈ ವೇಳೆ ರೈಲಿನಲ್ಲಿದ್ದ ಕೆಲ ಪ್ರಯಾಣಿಕರು ಅವರಿಬ್ಬರ ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೇದೆ ಕೋಪಗೊಂಡು ನಾಲ್ವರನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ವರದಿಗಳು ತಿಳಿಸಿವೆ. ಆರೋಪಿ ಆರ್ಪಿಎಫ್ ಪೇದೆಯನ್ನು ಚೇತನ್ ಸಿಂಗ್ ಎಂದು ಗುರುತಿಸಲಾಗಿದ್ದು, ಘಟನೆಯ ಬಳಿಕ ರೈಲಿನಿಂದ ಜಿಗಿದು ಪರಾರಿಯಾಗಲು ಯತ್ನಿಸಿದ ಆತನನ್ನು ಪೊಲೀಸರು ಬಂಧಿಸಿದ್ದಾರೆ.
[vc_row][vc_column]
BREAKING NEWS
- ‘ಸಂಪುಟ ಸಭೆಯಲ್ಲಿ ಮೋಡ ಬಿತ್ತನೆಗೆ ಚರ್ಚೆ’: ಡಿಸಿಎಂ ಡಿ.ಕೆ.ಶಿವಕುಮಾರ್
- ನಿಯಮ ಉಲ್ಲಂಘನೆ ಮಾಡಿಯೂ ಟ್ರಾಫಿಕ್ ಪೊಲೀಸರಿಗೆ ಯುವತಿಯಿಂದ ಅವಾಜ್!
- ‘ಕಾವೇರಿ ನೆಪದಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜಕೀಯ ಮಾಡುತ್ತಿದೆ’- ಸಿದ್ದರಾಮಯ್ಯ
- ಭಾರತೀಯ ವಾಯುಪಡೆಗೆ C-295 ಸರಕು ವಿಮಾನ ಸೇರ್ಪಡೆ
- ವಿಶಾಖಪಟ್ಟಣಂ ಮೃಗಾಲಯದಲ್ಲಿ 18 ವರ್ಷದ ಸಿಂಹಿಣಿ ಹೃದಯಾಘಾತದಿಂದ ಸಾವು
- ‘ಶಾಂತಿಯುತ ಹೋರಾಟಕ್ಕೆ ಸರ್ಕಾರ ಅಡಚಣೆ ಮಾಡಲ್ಲ’: ಡಿಕೆಶಿ
- ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ
- ಇಂದು ಮೊದಲ ಬಾರಿಗೆ ಇಡೀ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”
- ‘ನನ್ನ ವಿರುದ್ಧ ಹೈದರ್ಬಾದ್ನಲ್ಲಿ ಸ್ಪರ್ಧಿಸಿ ‘- ರಾಹುಲ್ಗೆ ಓವೈಸಿ ಸವಾಲು
- ಮರೆತೂ ಕೂಡ ಈ ಸಮಯದಲ್ಲಿ ಮನೆ ಕಸ ಗುಡಿಸಬೇಡಿ – ಪೊರಕೆಗೆ ಕಾಲಿನಿಂದ ತುಳಿಯೋದ್ರಿಂದ ಬರುತ್ತೆ ಈ ಸಮಸ್ಯೆ..!!