Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ದಾವಣಗೆರೆ: ನಿನ್ನೆ ಮಳೆ ಎಲ್ಲೆಲ್ಲಿ ಎಷ್ಟು ಬಂದಿದೆ.! ಎಷ್ಟು ಎಕರೆ ಭತ್ತ ಹಾನಿ.?

0

ದಾವಣಗೆರೆ : ಜಿಲ್ಲೆಯಲ್ಲಿ ಮೇ.21 ರಂದು ಬಿದ್ದ ಮಳೆಯ ವಿವರದನ್ವಯ 13.6 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 79.40 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಕೆಳಕಂಡಂತಿದೆ.

ಚನ್ನಗಿರಿಯಲ್ಲಿ ವಾಡಿಕೆ ಮಳೆ 2.5 ಮಿ.ಮೀ ಹಾಗೂ ವಾಸ್ತವ ಮಳೆ 9.5 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆ 1.0 ಮಿ.ಮೀ ಹಾಗೂ ವಾಸ್ತವ ಮಳೆ 19.5 ಮಿ.ಮೀ, ಹರಿಹರದಲ್ಲಿ ವಾಡಿಕೆ ಮಳೆ 1.1 ಮಿ.ಮೀ ಹಾಗೂ ವಾಸ್ತವ ಮಳೆ 17.2 ಮಿ.ಮೀ, ಹೊನ್ನಾಳಿ ವಾಡಿಕೆ ಮಳೆ 2.4 ಮಿ.ಮೀ ಹಾಗೂ ವಾಸ್ತವ ಮಳೆ 9.0 ಮಿ.ಮೀ, ಜಗಳೂರು ವಾಡಿಕೆ ಮಳೆ 1.9 ಮಿ.ಮೀ ಹಾಗೂ ವಾಸ್ತವ ಮಳೆ 13.7 ಮಿ.ಮೀ,  ನ್ಯಾಮತಿಯಲ್ಲಿ ವಾಡಿಕೆ ಮಳೆ 2.5 ಮಿ.ಮೀ ಹಾಗೂ ವಾಸ್ತವ ಮಳೆ 14.1 ಮಿ.ಮೀ ಮಳೆÉಯಾಗಿದೆ.

ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 01 ಪಕ್ಕಾಮನೆ ಭಾಗಶ: ಹಾನಿಯಾಗಿದ್ದು, ಹಾಗೂ 150 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು ರೂ.30.60 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 02 ಕಚ್ಚಾಮನೆ ಭಾಗಶ: ಹಾನಿಯಾಗಿದ್ದು, 295 ಎಕರೆ ಭತ್ತ ಹಾನಿಯಾಗಿದ್ದು  ಒಟ್ಟು ರೂ.18.93 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 01 ಕಚ್ಚಾಮನೆ ತೀವ್ರ ಹಾನಿಯಾಗಿದು,್ದ10 ಕಚ್ಚಾಮನೆ ಭಾಗಶಃ ಹಾನಿಯಾಗಿದ್ದು, ಹಾಗೂ 30 ಎಕರೆ ಅಡಿಕೆ, 38 ಎಕರೆ ಬಾಳೆ, 20 ಎಕರೆ ಪಪ್ಪಾಯಿ ಬೆಳೆ ಹಾನಿಯಾಗಿದ್ದು, ಮತ್ತು 01 ಎತ್ತು ಮೃತಪಟ್ಟಿದ್ದು ಒಟ್ಟು ರೂ.29.87 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ಜಿಲ್ಲೆಯಲ್ಲಿ ಒಟ್ಟಾರೆ ರೂ.79.40 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.