ರಷ್ಯಾ ಹಾಗೂ ಉಕ್ರೇನ್ ನಡುವೆ ಯುದ್ಧ ದಿನದಿಂದ ದಿನಕ್ಕೆ ಭೀಕರವಾಗುತ್ತಿದ್ದು, ಇಬ್ಬರ ಜಗಳದಲ್ಲಿ ಈಗಾಗಲೇ ಲಕ್ಷಾಂತರ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆಂಬ ಆರೋಪ ಇದೆ. ಆದರೂ ಯುದ್ಧ ನಿಲ್ಲಿಸಲು ಎರಡೂ ದೇಶಗಳು ಸಿದ್ಧವಿಲ್ಲ. ಹೀಗಾಗಿಯೇ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದು, ಇದೀಗ ರಷ್ಯಾ ಮತ್ತೆ ಸಮುದ್ರ ಒಪ್ಪಂದ ಹಿಂತೆಗೆದುಕೊಂಡ ಬಳಿಕ ಮಂಗಳವಾರ ಕ್ಷಿಪಣಿ ದಾಳಿ ನಡೆಸಿದೆ. ಒಪ್ಪಂದದಿಂದ ಹಿಂತೆಗೆದುಕೊಂಡ ಕೆಲವೇ ಗಂಟೆಗಳಲ್ಲಿ ದಕ್ಷಿಣದ ಬಂದರು ನಗರಗಳಾದ ಒಡೆಸಾ ಮತ್ತು ಮೈಕೊಲೈವ್ ಅನ್ನು ರಷ್ಯಾ ಕ್ಷಿಪಣಿ ಮೂಲಕ ಹೊಡೆದುರುಳಿಸಿದೆ. ಉಕ್ರೇನ್ನ ಕಪ್ಪು ಸಮುದ್ರದ ಕರಾವಳಿಯ ಮೇಲೆ ರಷ್ಯಾದ ಕ್ಷಿಪಣಿ ದಾಳಿ ನಡೆಸಿ 60,000 ಟನ್ ಧಾನ್ಯಗಳನ್ನು ನಾಶಪಡಿಸಿದೆ ಎಂದು ವರದಿಯಾಗಿದೆ. ಈ ದಾಳಿಯಿಂದ ಮೂಲಸೌಕರ್ಯಗಳ ರಫ್ತು ನಿಂತಿದೆ ಎಂದು ಕೃಷಿ ಸಚಿವ ಮೈಕೋಲಾ ಸೋಲ್ಸ್ಕಿ ಹೇಳಿದ್ದಾರೆ. ಹೀಗಾಗಿಯೇ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದು, ಇದೀಗ ಉಕ್ರೇನ್ ತನ್ನ ನೆಲೆಗಳ ಮೇಲೆ ಭೀಕರವಾದ ಡ್ರೋನ್ ದಾಳಿ ನಡೆಸಿದೆ ಎಂದು ರಷ್ಯಾ ರೊಚ್ಚಿಗೆದ್ದಿದೆ.
[vc_row][vc_column]
BREAKING NEWS
- ‘ಕಾಂಗ್ರೆಸ್ ಪಕ್ಷ ತುಕ್ಕುಹಿಡಿದ ಕಬ್ಬಿಣವಾಗಿದೆ’ – ಮೋದಿ
- ‘ನೈತಿಕ ದಿವಾಳಿತನದ ಸಾರಾಯಿ ಗ್ಯಾರೆಂಟಿ ಸರ್ಕಾರ’ – ಬೊಮ್ಮಾಯಿ ಕಿಡಿ
- ‘ಸಂಪುಟ ಸಭೆಯಲ್ಲಿ ಮೋಡ ಬಿತ್ತನೆಗೆ ಚರ್ಚೆ’: ಡಿಸಿಎಂ ಡಿ.ಕೆ.ಶಿವಕುಮಾರ್
- ನಿಯಮ ಉಲ್ಲಂಘನೆ ಮಾಡಿಯೂ ಟ್ರಾಫಿಕ್ ಪೊಲೀಸರಿಗೆ ಯುವತಿಯಿಂದ ಅವಾಜ್!
- ‘ಕಾವೇರಿ ನೆಪದಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜಕೀಯ ಮಾಡುತ್ತಿದೆ’- ಸಿದ್ದರಾಮಯ್ಯ
- ಭಾರತೀಯ ವಾಯುಪಡೆಗೆ C-295 ಸರಕು ವಿಮಾನ ಸೇರ್ಪಡೆ
- ವಿಶಾಖಪಟ್ಟಣಂ ಮೃಗಾಲಯದಲ್ಲಿ 18 ವರ್ಷದ ಸಿಂಹಿಣಿ ಹೃದಯಾಘಾತದಿಂದ ಸಾವು
- ‘ಶಾಂತಿಯುತ ಹೋರಾಟಕ್ಕೆ ಸರ್ಕಾರ ಅಡಚಣೆ ಮಾಡಲ್ಲ’: ಡಿಕೆಶಿ
- ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ
- ಇಂದು ಮೊದಲ ಬಾರಿಗೆ ಇಡೀ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”