Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ನೇಮಕಾತಿ: ದೇಶದ ಗಡಿ ಕಾಯುವ ಅಗ್ನಿವೀರರಿಗೆ ರೈಲ್ವೆ ಉದ್ಯೋಗದಲ್ಲಿ ಶೇ 15ರಷ್ಟು ಮೀಸಲಾತಿ

0

ನವದೆಹಲಿ: ವಿವಿಧ ಇಲಾಖೆಗಳಲ್ಲಿನ ನಾನ್‌ ಗೆಜೆಟೆಡ್‌ ಹುದ್ದೆಗಳ ಭರ್ತಿಗೆ ನಡೆಯುವ ನೇರ ನೇಮಕಾತಿಯಲ್ಲಿ ರೈಲ್ವೆಯು ಅಗ್ನಿವೀರರಿಗೆ ಶೇ 15ರಷ್ಟು ಒಟ್ಟು ಮೀಸಲಾತಿ, ವಯೋಮಿತಿಯಲ್ಲಿ ಸಡಿಲಿಕೆ ಹಾಗೂ ದೈಹಿಕ ಪರೀಕ್ಷೆಯಿಂದ ವಿನಾಯಿತಿ ನೀಡಲಿದೆ ಎಂದು ಮೂಲಗಳು ಗುರುವಾರ ಹೇಳಿವೆ.

ಸುಡಾನ್ : ಆಂತರಿಕ ಯುದ್ಧದಿಂದ ಸಾವಿನ ಸಂಖ್ಯೆ 600ಕ್ಕಿಂತ ಅಧಿಕ

ಅಗ್ನಿವೀರರಿಗೆ ಈ ಸೌಲಭ್ಯಗಳನ್ನು ನೀಡುವುದಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳುವಂತೆ ರೈಲ್ವೆ ವಲಯಗಳ ಪ್ರಧಾನ ವ್ಯವಸ್ಥಾಪಕರಿಗೆ ರೈಲ್ವೆ ಮಂಡಳಿ ಪತ್ರ ಬರೆದಿದೆ. ಅಗ್ನಿವೀರರಿಗಾಗಿ ರೈಲ್ವೆ ಭದ್ರತಾ ಪಡೆಯಲ್ಲಿ (ಆರ್‌ಪಿಎಫ್‌) ಕೂಡ ಮೀಸಲಾತಿ ನೀತಿಯನ್ನು ಜಾರಿಗೆ ತರಲಾಗುತ್ತದೆ ಎಂದು ಇವೇ ಮೂಲಗಳು ಹೇಳಿವೆ. ಮೊದಲ ಬ್ಯಾಚ್‌ನ ಅಗ್ನಿವೀರರಿಗೆ ವಯೋಮಿತಿಯಲ್ಲಿ ಐದು ವರ್ಷ ಹಾಗೂ ನಂತರದ ಬ್ಯಾಚ್‌ಗಳ ಅಗ್ನಿವೀರರಿಗೆ ಮೂರು ವರ್ಷಗಳಷ್ಟು ಸಡಿಲಿಕೆ ನೀಡಲಾಗುವುದು. ರೈಲ್ವೆಯ ವಿವಿಧ ವಿಭಾಗಗಳಲ್ಲಿನ ಹಂತ–1 ಹಾಗೂ ಹಂತ–2 ಹಾಗೂ ಅದಕ್ಕೂ ಮೇಲ್ಪಟ್ಟ ಹುದ್ದೆಗಳಿಗೆ ಈ ಸೌಲಭ್ಯ ನೀಡಲಾಗುತ್ತದೆ ಎಂದು ಮೂಲಗಳು ಹೇಳಿವೆ.

Leave A Reply

Your email address will not be published.