Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಮಧು ಬಂಗಾರಪ್ಪ

0

ಶಿವಮೊಗ್ಗ: ‘ಪಠ್ಯಪುಸ್ತಕಗಳನ್ನು ಪರಿಷ್ಕರಿಸುವುದು ಖಚಿತ. ಅದರಲ್ಲಿ ಯಾವುದೇ ಗೊಂದಲವಿಲ್ಲ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು. ‘ಪಠ್ಯ ಪರಿಷ್ಕರಣೆಗೆ ಸ್ವಲ್ಪ ಸಮಯ ಬೇಕು.

ಹಂತ ಹಂತವಾಗಿ ಎಲ್ಲವನ್ನೂ ನಿರ್ವಹಿಸುತ್ತೇವೆ. ಯಾವ ಯಾವ ಭಾಗವನ್ನು ಪರಿಷ್ಕರಣೆಗೆ ಒಳ‍ಪಡಿಸಬೇಕು ಎಂಬುದರ ಬಗ್ಗೆ ಪರಿಶೀಲನೆ ನಡೆಯುತ್ತಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು. ‘ನಾನು ಅಧಿಕಾರ ವಹಿಸಿಕೊಳ್ಳುವ ಹೊತ್ತಿಗೆ ಪಠ್ಯಪುಸ್ತಕ ಮುದ್ರಣ ಪೂರ್ಣಗೊಂಡು ಶಾಲೆಗಳಿಗೆ ಕಳುಹಿಸಲಾಗಿತ್ತು. ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆ ಆಗದಂತೆ ಮುಂಜಾಗ್ರತೆ ವಹಿಸಿ ಪಠ್ಯ ಪರಿಷ್ಕರಣೆ ಮಾಡಬೇಕಿದೆ.

ಒಡಿಶಾ ರೈಲು ಅಪಘಾತ: ಬಾಲಸೋರ್‌ನಲ್ಲಿ ಭರದಿಂದ ಸಾಗಿದ ರೈಲು ಹಳಿ ಮರು ನಿರ್ಮಾಣ ಕಾರ್ಯ

ಈಗಾಗಲೇ ಪಠ್ಯಪುಸ್ತಕ ವಿತರಣೆಯಾಗಿದ್ದರೂ ಪರಿಷ್ಕರಣೆಗೆ ಅವಕಾಶವಿದೆ. ಅದನ್ನು ಕಾನೂನುಬದ್ಧವಾಗಿ ಮಾಡಲಾಗುವುದು’ ಎಂದು ಹೇಳಿದರು. ‘ಪರಿಷ್ಕರಣೆ ವಿಚಾರದಲ್ಲಿ ನನ್ನ ಸ್ವಾರ್ಥ ಏನೂ ಇಲ್ಲ. ಮಕ್ಕಳ ಹಿತ, ಭವಿಷ್ಯ ಗಮನದಲ್ಲಿಟ್ಟುಕೊಂಡು ಈ ಕಾರ್ಯಕ್ಕೆ ಕೈ ಹಾಕಿದ್ದೇವೆ’ ಎಂದರು.

Leave A Reply

Your email address will not be published.