ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡಗೆ ಲಿಫ್ಟ್ ಸ್ಟಿಕ್ ಹಚ್ಚಲು ಅವಕಾಶ ಕೊಟ್ಟಿದ್ದ ಮಹಿಳಾ ಪಿಎಸ್ಐಗೆ ನೋಟಿಸ್ ಜಾರಿ ಮಾಡಲಾಗಿದೆ. ಜೂನ್ 15 ರಂದು ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಪವಿತ್ರಾಗೌಡ ಮನೆ ಮಹಜರು ಮಾಡಿದ್ದರು. ಈ ವೇಳೆ ಪವಿತ್ರಾಗೌಡಗೆ ಲಿಫ್ಟ್ ಸ್ಟಿಕ್ ಹಚ್ಚಲು ಮಹಿಳಾ ಪಿಎಸ್ಐ ಅವಕಾಶ ಮಾಡಿಕೊಟ್ಟಿದ್ದರು. ಬಳಿಕ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಮಹಿಳಾ ಪಿಎಸ್ಐಗೆ ನೋಟಿಸ್ ನೀಡಲಾಗಿದೆ. ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್, ಮಹಿಳಾ ಪಿಎಸ್ಐಗೆ ನೋಟಿಸ್ ನೀಡಿದ್ದಾರೆ.
