Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

 ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 9ಕ್ಕೆ ಏರಿಕೆ

0

ಪಶ್ಚಿಮ ಮೇದಿನಿಪುರ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ಪಶ್ಚಿಮ ಮೇದಿನಿಪುರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಬೃಹತ್ ಸ್ಫೋಟದಲ್ಲಿ ಇಲ್ಲಿಯವರೆಗೂ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏತನ್ಮಧ್ಯೆ, ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಅಪರಾಧ ತನಿಖಾ ಇಲಾಖೆ (ಸಿಐಡಿ) ಘಟನೆಯ ತನಿಖೆಯನ್ನು ಪ್ರಾರಂಭಿಸಿದೆ. ಮೂಲಗಳ ಪ್ರಕಾರ, ರಾಜ್ಯ ಸರ್ಕಾರವು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ ನಂತರ ಕೋಲ್ಕತ್ತಾದಿಂದ ಅಪರಾಧ ತನಿಖಾ ವಿಭಾಗದ (ಸಿಐಡಿ) ತಂಡವು ಮಂಗಳವಾರ ರಾತ್ರಿ 9.45 ಕ್ಕೆ ಸ್ಥಳಕ್ಕೆ ತಲುಪಿ ವಿಧಿವಿಜ್ಞಾನ ತಜ್ಞರ ಸಹಾಯದಿಂದ ತನಿಖೆ ಆರಂಭಿಸಿತು. ಪೂರ್ವ ಮೇದಿನಿಪುರ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ್ ಕೆ ಮಾತನಾಡಿ, “ಇಲ್ಲಿಯವರೆಗೆ 9 ಶವಗಳನ್ನು ಹೊರತೆಗೆಯಲಾಗಿದೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಕೋಲ್ಕತ್ತಾದ ಎಸ್‌ಎಸ್‌ಕೆಎಂಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಇದು ಅಕ್ರಮ ಫ್ಯಾಕ್ಟರಿ. ಈ ಕಾರ್ಖಾನೆಯ ವಿರುದ್ಧ ಈ ಹಿಂದೆಯೂ 3ರಿಂದ 4 ಪ್ರಕರಣಗಳು ದಾಖಲಾಗಿವೆ. ಹಲವು ಬಾರಿ ದಾಳಿ ನಡೆಸಿದ್ದರೂ ಆರೋಪಿಗಳು ಇದನ್ನು ನಡೆಸುತ್ತಲೇ ಇದ್ದಾರೆ. ಕೃಷ್ಣಪಾದ ಬಾಗ್ ಅಲಿಯಾಸ್ ಎಂಬ ಆರೋಪಿಯನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಸ್ಪಿ ಹೇಳಿದರು. ಮೃತರ ಕುಟುಂಬಕ್ಕೆ 2.5 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 1 ಲಕ್ಷ ರೂಪಾಯಿ ಪರಿಹಾರವನ್ನು ಸಿಎಂ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

Leave A Reply

Your email address will not be published.