ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ (ಬುಧವಾರ) ನವದೆಹಲಿಯ ಪ್ರಗತಿ ಮೈದಾನದಲ್ಲಿ ಅತ್ಯದ್ಭುತ ವಿನ್ಯಾಸಗಳೊಂದಿಗೆ ನಿರ್ವಣಗೊಂಡಿರುವ ಸುಧಾರಿತ ಸಮುಚ್ಚಯ ಇಂಡಿಯಾ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್ (ಐಟಿಪಿಒ) ಅನ್ನು ಉದ್ಘಾಟಿಸಿದ್ದಾರೆ. ಈ ಬಗ್ಗೆ ಖ್ಯಾತ ಉದ್ಯಮಿ ಆನಂದ ಮಹೀಂದ್ರಾ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಐಟಿಪಿಒ ಸಂಕೀರ್ಣದ ಫೋಟೋಗಳನ್ನು ಟ್ವೀಟ್ ಮಾಡಿರುವ ಆನಂದ ಮಹೀಂದ್ರಾ ಅವರು, ‘ನನ್ನ ವೃತ್ತಿಜೀವನದುದ್ದಕ್ಕೂ ನಾನು ಹಳೆಯ ಪ್ರಗತಿ ಮೈದಾನದ ಸಂಕೀರ್ಣಕ್ಕೆ ಭೇಟಿ ನೀಡಿದ್ದು ನನಗೆ ನೆನಪಿದೆ. ಅದು ಅಂತರರಾಷ್ಟ್ರೀಯ ಸಮ್ಮೇಳನ ಮತ್ತು ಪ್ರದರ್ಶನ ಮೂಲಸೌಕರ್ಯಗಳ ವಿಷಯದಲ್ಲಿ ನಾವು ಎಷ್ಟು ಹಿಂದುಳಿದಿದ್ದೇವೆ ಎಂಬುದನ್ನು ಹೈಲೈಟ್ ಮಾಡುತ್ತಿತ್ತು. ಇದು ಮುಜುಗರಕ್ಕೂ ಕಾರಣವಾಗಿತ್ತು. ಆದರೆ ಈ ಹೊಸ ಕನ್ವೆನ್ಶನ್ ಸೆಂಟರ್ ನಿಖರವಾಗಿ ಸರಿಯಾದ ಸಮಯದಲ್ಲಿ ಬಂದಿದೆ. ವಾಣಿಜ್ಯ ಪ್ರಪಂಚವು ಭಾರತದ ಬಾಗಿಲಿಗೆ ದಾರಿಯನ್ನು ಹುಡುಕಿಕೊಡುವಂತೆ ಐಟಿಪಿಒ ಮಾಡಿದೆ. ಬಹಳ ಹೆಮ್ಮೆಯಿಂದ ಹೊಸ ಸಂಕೀರ್ಣದಲ್ಲಿ ಸಮ್ಮೇಳನಗಳಿಗೆ ಹಾಜರಾಗಲು ನಾನು ಎದುರು ನೋಡುತ್ತಿದ್ದೇನೆ’ ಎಂದು ತಿಳಿಸಿದ್ದಾರೆ. ಪ್ರಗತಿ ಮೈದಾನ ಸಂಕೀರ್ಣ ಎಂದೂ ಕರೆಯಲ್ಪಡುವ ವಿಶಾಲವಾದ ಐಟಿಪಿಒ ಸಂಕೀರ್ಣವು ಸರಿಸುಮಾರು 123 ಎಕರೆಗಳನ್ನು ವ್ಯಾಪಿಸಿದೆ. ಇದು ಭಾರತದ ಅತಿದೊಡ್ಡ ಸಭೆಗಳು, ಪ್ರೋತ್ಸಾಹಕಗಳು, ಸಮ್ಮೇಳನಗಳು ಮತ್ತು ಪ್ರದರ್ಶನಗಳು (MICE) ನಡೆಯುವ ತಾಣವಾಗಿದೆ.
[vc_row][vc_column]
BREAKING NEWS
- ಮದುವೆಯಲ್ಲಿ ಕೈತಪ್ಪಿ ಅತಿಥಿಗಳ ಮೇಲೆ ಬಿದ್ದ ಮುಸುರೆ ತಟ್ಟೆಗಳು – ವೇಟರ್ನನ್ನು ಕೊಂದು, ಪೊದೆಗೆ ಎಸೆದ ಪಾಪಿಗಳು ಅರೆಸ್ಟ್
- ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಸುದ್ದಿಗೋಷ್ಠಿಗೂ ಮುನ್ನ ಪೊಲೀಸ್ ವಶಕ್ಕೆ
- ಯುನೆಸ್ಕೋದ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಸೇರಿದ ಗಾರ್ಬಾ ನೃತ್ಯ
- ‘ಗೊಡ್ಡು ಬೆದರಿಕೆಗಳಿಗೆ ಹೆದರುವ ಪಕ್ಷ ಬಿಜೆಪಿ ಅಲ್ಲ’- ಬಿ.ವೈ.ವಿಜಯೇಂದ್ರ
- ಲಾರಿ – ಟಾಟಾ ಏಸ್ ನಡುವೆ ಭೀಕರ ಅಪಘಾತ-ನಾಲ್ವರು ಸಾವು
- ಜೈನಮುನಿ ಹತ್ಯೆ ಪ್ರಕರಣ-500ಕ್ಕೂ ಹೆಚ್ಚು ಪುಟಗಳ ಚಾರ್ಜ್ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆ
- ದೈವಾರಾಧನೆ ನಮ್ಮ ನೆಲದ ಸಂಸ್ಕೃತಿ ಅದಕ್ಕೆ ಅವಮಾನ ಮಾಡಬೇಡಿ –ರಿಷಬ್ ಶೆಟ್ಟಿ
- ವರದಕ್ಷಿಣೆ ದಾಹಕ್ಕೆ ಬಲಿಯಾದರೆ ಯುವ ವ್ಯದ್ಯೆ ?
- ನಿಮ್ಮ ಪ್ಯಾನ್ ಕಾರ್ಡ್ ಕಳೆದು ಹೋಗಿದ್ಯಾ..? ಡೂಪ್ಲಿಕೇಟ್ ಕಾರ್ಡ್ ಪಡೆಯಲು ಹೀಗೆ ಮಾಡಿ
- ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಡಿಸೆಂಬರ್ 9ರಂದು ದೇವರ ದರ್ಶನ ಸಮಯದಲ್ಲಿ ಬದಲಾವಣೆ