Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಪ್ರತಿಭಾ ಕಾರಂಜಿ ತಾಲೀಮು ವೇಳೆ ಪೆಟ್ರೋಲ್ ಮೈಮೇಲೆ ಬಿದ್ದು ವಿದ್ಯಾರ್ಥಿಗೆ ಗಾಯ

0

ರಾಮನಗರ: ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ನಡೆದ ತಾಲೀಮಿನಲ್ಲಿ ಪೆಟ್ರೋಲ್ ಬಿದ್ದು ವಿದ್ಯಾರ್ಥಿಗೆ ಸುಟ್ಟ ಗಾಯಗಳಾದ ಘಟನೆ ರಾಮನಗರ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಶಾಲೆಯಲ್ಲಿ ನಡೆದಿದೆ.

ಗಾಯಗೊಂಡ ವಿದ್ಯಾರ್ಥಿಯನ್ನು ಪ್ರೀತಮ್ (12) ಎನ್ನಲಾಗಿದೆ

ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆದಿದೆದ್ದು, ಈ ವೇಳೆ ವಿದ್ಯಾರ್ಥಿಗಳು ವೀರಗಾಸೆ ಪ್ರದರ್ಶನ ನಡೆಸಿದ್ದಾರೆ, ಈ ಪ್ರದರ್ಶನದ ವೇಳೆ ವಿದ್ಯಾರ್ಥಿಗಳ ಕೈಯಲ್ಲಿ ಪೆಟ್ರೋಲ್ ನೀಡಲಾಗಿತ್ತು ತಾಲೀಮು ನಡೆಸುವ ವೇಳೆ ಪೆಟ್ರೋಲ್ ವಿದ್ಯಾರ್ಥಿಯ ಮೈಮೇಲೆ ಬಿದ್ದು ಕಣ್ಣು, ಮುಖ ಹಾಗೂ ತಲೆ ಭಾಗಕ್ಕೆ ಸುಟ್ಟ ಗಾಯಗಳಾಗಿವೆ, ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಯಿತು.

ಇನ್ನು ವಿದ್ಯಾರ್ಥಿಗಳ ಕೈಯಲ್ಲಿ ಪೆಟ್ರೋಲ್ ಬಳಸಲು ಅನುಮತಿ ನೀಡಿದಕ್ಕೆ ಶಿಕ್ಷಕರ ವಿರುದ್ದ ಪೋಷಕರು ಆಕ್ರೋಶಗೊಂಡಿದ್ದಾರೆ.

 

Leave A Reply

Your email address will not be published.