Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಪ್ರವಾಸಿಗರ ಗಮನಕ್ಕೆ; 2 ದಿನ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ

0
ಮೈಸೂರು: ಮೈಸೂರಿಗೆ ಭೇಟಿ ನೀಡುವ ಪ್ರವಾಸಿಗರ ಗಮನಕ್ಕೆ. ಎರಡು ದಿನಗಳ ಕಾಲ ಮೈಸೂರು ಅರಮನೆಗೆ ಸಾರ್ವಜನಿಕರ ಭೇಟಿ ನಿಷೇಧಿಸಿ ಮೈಸೂರು ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.
ಆಗಸ್ಟ್ 1ರ ಮಂಗಳವಾರ ಮತ್ತು ಆಗಸ್ಟ್ 2ರ ಬುಧವಾರ ಮೈಸೂರು ಅರಮನೆಗೆ ಸಾರ್ವಜನಿಕರ ಭೇಟಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆಗಸ್ಟ್‌ 2ರಂದು ನಡೆಯಬೇಕಿದ್ದ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ಸಹ ರದ್ದುಗೊಳಿಸಲಾಗಿದೆ.

ಎರಡು ದಿನಗಳ ಕಾಲ ಮೈಸೂರು ಅರಮನೆಗೆ ಜನರ ಭೇಟಿ ಮಾತ್ರವಲ್ಲ, ಭದ್ರತಾ ದೃಷ್ಟಿಯಿಂದ ಅರಮನೆ ಸುತ್ತಮುತ್ತ ಡ್ರೋನ್ ಹಾರಾಟವನ್ನು ಸಹ ಮೈಸೂರು ಪೊಲೀಸರು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.

ನಿರ್ಬಂಧ ಏಕೆ?
 ಜಿ20 ಶೃಂಗ ಸಭೆಯಲ್ಲಿ ಪಾಲ್ಗೊಳ್ಳುವ ಗಣ್ಯರು, ವಿವಿಧ ದೇಶಗಳ ಪ್ರತಿನಿಧಿಗಳು ಮೈಸೂರು ಅರಮನೆಗೆ ಭೇಟಿ ನೀಡುವ ಹಿನ್ನಲೆಯಲ್ಲಿ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
Leave A Reply

Your email address will not be published.