Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಬಂಗಲೆ ನಿರ್ಮಿಸಲು ಸರ್ಕಾರಿ ಭೂಮಿ ಒತ್ತುವರಿ ಪ್ರಕಾಶ್ ರಾಜ್‌ಗೆ ನೋಟಿಸ್‌

0

ಚೆನ್ನೈ: ಕೊಡೈಕೆನಾಲ್‌ನ ವಿಲ್‌ಪಟ್ಟಿ ಪಂಚಾಯತ್‌ನಲ್ಲಿರುವ ಸರ್ಕಾರಿ ಭೂಮಿಯನ್ನು ಬಂಗಲೆಗಳನ್ನು ನಿರ್ಮಿಸಲು ಒತ್ತುವರಿ ಮಾಡಿಕೊಂಡಿರುವ ಆರೋಪದ ಕುರಿತು ನಟರಾದ ಪ್ರಕಾಶ್ ರಾಜ್ ಮತ್ತು ಬಾಬಿ ಸಿಂಹ ಅವರಿಗೆ ಕೊಡೈಕೆನಾಲ್ ಉಪವಲಯ ಅಭಿವೃದ್ಧಿ ಅಧಿಕಾರಿ ವಿವರಣೆ ನೀಡುವಂತೆ ನೋಟಿಸ್ ಜಾರಿ ಮಾಡಿದ್ದಾರೆ.

ಮೂಲಗಳ ಪ್ರಕಾರ, ಪೇತುಪರೈ ಗ್ರಾಮದ ಅಧ್ಯಕ್ಷ ಕೆ.ವಿ.ಮಹೇಂದ್ರನ್ ಅವರು ರೈತರೂ ಆಗಿದ್ದು, ನಟರಾದ ಪ್ರಕಾಶ್ ರಾಜ್ ಮತ್ತು ಬಾಬಿ ಸಿಂಹ ಅವರು ತಮ್ಮ ಬಂಗಲೆಗಳನ್ನು ನಿರ್ಮಿಸಲು ಪೇತುಪರೈ ಮತ್ತು ಭಾರತಿಪುರಂ ಅಣ್ಣಾನಗರ ಬಳಿಯ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು

2,500 ಚದರ ಅಡಿಯಲ್ಲಿ ಬಂಗಲೆ ನಿರ್ಮಾಣಕ್ಕೆ ಅನುಮತಿ ಪಡೆದಿದ್ದ ಅವರು 4,000 ಚದರ ಅಡಿ ಪ್ರದೇಶದಲ್ಲಿ ಬಂಗಲೆ ನಿರ್ಮಾಣ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಬ್ಬರು ನಟರೂ ಸಾರ್ವಜನಿಕ ರಸ್ತೆಗಳನ್ನು ಅತಿಕ್ರಮಿಸಿ ತಮ್ಮ ಬಂಗಲೆಗಳಿಗೆ ರಸ್ತೆ ನಿರ್ಮಿಸಿಕೊಂಡಿದ್ದಾರೆ. ಈ ಬಗ್ಗೆ ಸಂಪೂರ್ಣ ತನಿಖೆ ಬಳಿಕ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Leave A Reply

Your email address will not be published.