ಬೆಂಗಳೂರು: ಬಿಜೆಪಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅವಕಾಶವಿತ್ತು. ಆದರೆ ಪಕ್ಷ ಅಧಿಕಾರಕ್ಕೆ ಬರಬಾರದೆಂಬುದು ಕೆಲವರಿಗಿತ್ತು. ಅದಕ್ಕಾಗಿ ಹಿರಿಯ ನಾಯಕರ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆಂದು ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ನನ್ನ ವಿರುದ್ಧ ಕಳೆದ 1 ವರ್ಷದಿಂದ ಷಡ್ಯಂತ್ರ ಮಾಡುತ್ತಾ ಬಂದಿದ್ದರು. ನಾನು & ಲಕ್ಷ್ಮಣ ಸವದಿ ಪಕ್ಷ ತೊರೆದಿರುವುದರಿಂದ ಬಿಜೆಪಿಗೆ ಹಾನಿಯಾಗಲಿದೆ. ಸೃಷ್ಟಿಯಾಗಿರುವ ಕಂದಕವನ್ನು ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪ್ಯಾಚ್ ಅಪ್ ಮಾಡಲಾಗಲ್ಲ ಎಂದಿದ್ದಾರೆ.