Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಬೆಂಗಳೂರು: ಖಾಸಗಿ ‌ಸಾರಿಗೆ ಬಂದ್ ಘೋಷಣೆ: ಜುಲೈ 24 ರಂದು ಸಭೆ ಕರೆದ ಸಾರಿಗೆ ಇಲಾಖೆ

0

ಬೆಂಗಳೂರು: ಜುಲೈ 27ರಂದು ಆಟೋ, ಟ್ಯಾಕ್ಸಿ ಮತ್ತು ಖಾಸಗಿ ಬಸ್ ಅಸೋಸಿಯೇಷನ್ ಬೆಂಗಳೂರು ಬಂದ್‌ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಜುಲೈ 24ರಂದು ಬೆಳಗ್ಗೆ 11 ಗಂಟೆಗೆ ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಶಾಂತಿನಗರದ ಆರ್‌ಟಿಓ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಮತ್ತು ಖಾಸಗಿ ಬಸ್‌ಗಳ ಮಾಲೀಕರು ಹಾಗೂ ಚಾಲಕರಿಗೆ ಸಭೆಗೆ ಆಹ್ವಾನ ಮಾಡಲಾಗಿದೆ. 35 ಖಾಸಗಿ ಚಾಲಕರ ಸಂಘಟನೆಗಳ ಅಧ್ಯಕ್ಷರನ್ನು ಸಭೆಗೆ ಆಹ್ವಾನಿಸಲಾಗಿದೆ. ಶಕ್ತಿ ಯೋಜನೆ ಜಾರಿ ಇಂದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಿಸಿದ ಬಳಿಕ ಖಾಸಗಿ ಬಸ್‌ ಮಾಲೀಕರು ಬಹಳಷ್ಟು ತೊಂದರೆಗೆ ಸಿಲುಕಿದ್ದಾರೆ. ಈ ಹಿನ್ನೆಲೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಬಸ್‌, ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರ ಸುಮಾರು 20ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ.

Leave A Reply

Your email address will not be published.