Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಬೆಂಗಳೂರು: ಗುದನಾಳದಲ್ಲಿ ಮರೆಮಾಚಿ ಚಿನ್ನದ ಬಿಸ್ಕೆಟ್‌ಗಳ ಕಳ್ಳಸಾಗಣೆ- 600 ಗ್ರಾಂ ಚಿನ್ನ ವಶಕ್ಕೆ

0

ದೇವನಹಳ್ಳಿ: ಚಿನ್ನದ ಬಿಸ್ಕೆಟ್‌ಗಳನ್ನ ಗುದನಾಳದಲ್ಲಿ ಮರೆಮಾಚಿ ಕಳ್ಳಸಾಗಾಣಿಕೆಗೆ ಯತ್ನಿಸಿದ ಪ್ರಯಾಣಿಕ ಬೆಂಗಳೂರಿನ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಬಂಧಿತ ಆರೋಪಿಯಿಂದ 600 ಗ್ರಾಂ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ. ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ಗೆ ಆಗಸ್ಟ್ 15 ರಂದು ಕೋಲ್ಕತ್ತಾದಿಂದ ಬಂದ ಏರ್ ಏಷ್ಯಾದ 15 1536 ಸಂಖ್ಯೆಯ ವಿಮಾನದಲ್ಲಿ ಬಂದಿಳಿದ್ದಿದ್ದಾನೆ. ವಿಮಾನದಲ್ಲಿನ ಪ್ರಯಾಣಿಕನೊಬ್ಬ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವ ಖಚಿತ ಮಾಹಿತಿ ಆದಾಯ ತೆರಿಗೆ ಇಲಾಖೆಯ ವಾಯು ಗುಪ್ತಚರ ಘಟಕದ ಅಧಿಕಾರಿಗಳಿಗೆ ಸಿಕ್ಕಿದೆ. ವಿಮಾನ ನಿಲ್ದಾಣದಲ್ಲಿ ಆತನನ್ನ ವಶಕ್ಕೆ ಪಡೆದ ಅಧಿಕಾರಿಗಳು ವಿಚಾರಣೆ ನಡೆಸಿ ತಪಾಸಣೆ ನಡೆಸಿದ್ದಾರೆ. ಆಗ ಆತ ತನ್ನ ಗುದನಾಳದಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನ ಮರೆಮಾಚಿ ಕಳ್ಳಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ಆರೋಪಿಯನ್ನ ವಶಕ್ಕೆ ಪಡೆಯಲಾಗಿದ್ದು 600 ಗ್ರಾಂ ತೂಕದ 30 ಚಿನ್ನದ ಬಿಸ್ಕೆಟ್ ಗಳನ್ನ ವಶಕ್ಕೆ ಪಡೆಯಲಾಗಿದೆ.

Leave A Reply

Your email address will not be published.