Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಬೆಂಗಳೂರು : ಸ್ಪಂದನಾ ಸಾವಿಗೆ ಕಂಬನಿ ಮಿಡಿದ ಚಿತ್ರರಂಗ – ಸಿಎಂ ಸೇರಿ ಗಣ್ಯರ ಸಂತಾಪ

0

ಬೆಂಗಳೂರು : ಬ್ಯಾಂಕಾಕ್ ನ ಪ್ರವಾಸದಲ್ಲಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಅಕಾಲಿಕವಾಗಿ ಮರಣ ಹೊಂದಿದ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಇಡೀ ಕನ್ನಡ ಚಿತ್ರರಂಗವೇ ಶೋಕ ವ್ಯಕ್ತಪಡಿಸಿದೆ. ಇತ್ತ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಮತ್ತಿತರ ಗಣ್ಯರು ಕಂಬನಿ ಮಿಡಿದಿದ್ದಾರೆ. ಸ್ಪಂದನಾ ಅವರ ಅಕಾಲಿಕ ನಿಧನ ವಾರ್ತೆ ಆಘಾತ ಉಂಟು ಮಾಡಿದೆ ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. ಇನ್ನು ಡಿಸಿಎಂ ಅವರು ಟ್ವೀಟ್ ಮಾಡಿದ್ದು ಸ್ಪಂದನಾ ಅವರ ಸಾವು ಮನಸ್ಸಿಗೆ ನೋವು ತರಿಸಿದ್ದು, ಅವರನ್ನು ಕಳೆದುಕೊಂಡ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿ ನೀಡಲೆಂದು ಆ ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ.

Leave A Reply

Your email address will not be published.