Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಬೆಲೆ ಏರಿಕೆ, ಭ್ರಷ್ಟಚಾರ ಡಬಲ್ ಇಂಜಿನ್ ಸರ್ಕಾರದ ಸಾಧನೆ: ಎಸ್.ಎಂ.ಎಲ್.ತಿಪ್ಪೇಸ್ವಾಮಿ

0

 

ಚಿತ್ರದುರ್ಗ: ಒಂದು ಕಡೆ ಮಿತಿ ಮೀರಿದ ಭ್ರಷ್ಟಾಚಾರ, ಮತ್ತೊಂದೆಡೆ ಅಗತ್ಯ ವಸ್ತುಗಳಾದ ಸಿಲಿಂಡರ್, ಅಡುಗೆ ಎಣ್ಣೆ, ಬೇಳೆ ಕಾಳುಗಳ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ ಮಾಡಿರುವುದೇ ಡಬಲ್ ಇಂಜಿನ್ ಬಿಜೆಪಿ ಸರ್ಕಾರದ ಸಾಧನೆ ಎಂದು ಕೆಪಿಸಿಸಿ ಸದಸ್ಯ, ಜಿಪಂ ಮಾಜಿ ಉಪಾಧ್ಯಕ್ಷ ಎಸ್.ಎಂ.ಎಲ್.ತಿಪ್ಪೇಸ್ವಾಮಿ ದೂರಿದರು.

ಭರಮಸಾಗರ ಹೋಬಳಿ ವ್ಯಾಪ್ತಿಯ ಬಹದ್ದೂರಘಟ್ಟ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಗಳಲ್ಲಿ ಮಾತನಾಡಿದರು.ಸಿಲಿಂಡರ್ ಕೊಳ್ಳಲು ಆಗದೇ ಬಡ, ಮಧ್ಯಮ ವರ್ಗದ ಜನ ಕಣ್ಣೀರು ಜೊತೆಗೆ ಬಿಜೆಪಿ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಹಿಂದೆಂದೂ ಕಂಡರಿಯದ ರೀತಿ ಜನರ ಬದುಕು ಬೀದಿಗೆ ಬಿದ್ದಿದೆ, ಕೋಟ್ಯಾಂತರ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೂ ಬಿಜೆಪಿ ಸರ್ಕಾರಕ್ಕೆ ಜನರ ಸಂಕಷ್ಟ ಅರಿವಿಗೆ ಬಂದಿಲ್ಲ ಎಂದರು.

ಹಣ ಲೂಟಿ ಹೊಡೆಯುವುದರಲ್ಲಿ ಮುಳುಗಿದೆ. ಇದಕ್ಕೆ ಗುತ್ತಿಗೆದಾರ ಸಂಘದ ಪತ್ರ, ಕೆಲ ಗುತ್ತಿಗೆದಾರರ ಆತ್ಮಹತ್ಯೆಯೇ ಸಾಕ್ಷಿ ಆಗಿದೆ. ಇಷ್ಟೇಲ್ಲ ಆದರೂ ಭ್ರಷ್ಟಾಚಾರ ನಿಲ್ಲಿಸಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಿಲ್ಲ ಎಂದು ದೂರಿದರು.

ಇನ್ನೂ ದುರಹಾಂಕರದ ಮಾತನ್ನಾಡುವ ಕ್ಷೇತ್ರದ ಶಾಸಕ ಚಂದ್ರಪ್ಪ, ಕೆರೆ-ಕಟ್ಟೆಗಳ ಹೂಳು ಎತ್ತುವಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆಸಿದ್ದು, ತನಿಖೆ ನಡೆಸುವಂತೆ ಪಕ್ಷ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ ಎಂದರು.

ಕಳೆದ ಬಾರಿ ಪಕ್ಷದಲ್ಲಿನ ಕೆಲವರ ಅಸಮಾಧಾನದಿಂದ ಕಾಂಗ್ರೆಸ್ ಸೋತಿದ್ದು, ಈ ಬಾರಿ ನಾವೆಲ್ಲರೂ ಒಗ್ಗೂಡಿ ಆಂಜನೇಯ ಅವರನ್ನು ದಾಖಲೆ ಮತಗಳ ಅಂತರದಲ್ಲಿ ಗೆಲ್ಲಿಸಿಕೊಳ್ಳಲು ಮುಂದಾಗಿದ್ದೇವೆ.‌ ಅದರಲ್ಲೂ ಕ್ಷೇತ್ರದ ಜನ, ಶಾಸಕರ ಅಹಂಕಾರಕ್ಕೆ ಬೇಸತ್ತು, ಆಂಜನೇಯ ಅವರ ಪರ ಹೆಚ್ಚು ಒಲವು ತೋರುತ್ತಿದ್ದಾರೆ. ಇದು ಅವರಲ್ಲಿ ನಡುಕ ಉಂಟು ಮಾಡಿದೆ ಎಂದರು.

ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ಕ್ಷೇತ್ರದ ಶಾಸಕರು ಬಾಯಿ ಬಿಟ್ಟರೇ ಬಚ್ಚಲು ಭಾಷೆ ಬಳಸುತ್ತಾರೆ. ಇದರಿಂದ ಅಧಿಕಾರಿಗಳು, ಗುತ್ತಿಗೆದಾರರು, ಜನಸಾಮಾನ್ಯರು ನೊಂದಿದ್ದಾರೆ ಎಂದು ಹೇಳಿದರು.

ಕ್ಷೇತ್ರದಲ್ಲಿ ಎಷ್ಟು ಕೆರೆಗಳು ಇವೆ ಎಂಬ ಮಾಹಿತಿ ಇಲ್ಲದ ಚಂದ್ರಪ್ಪ, ಮುನ್ನೂರು ಕೆರೆ ಅಭಿವೃದ್ಧಿಪಡಿಸಿದ್ದೇನೆ ಎಂದು ಸುಳ್ಳು ಹೇಳುತ್ತಿದ್ದು, ಈ ಸಂಬಂಧ ತಾಕತ್ತು ಇದ್ದರೇ ಶ್ವೇತಪತ್ರ ಹೊರಡಿಸಲಿ ಎಂದು ಸವಾಲು ಹಾಕಿದರು.

ಈಗಾಗಲೇ ಕಾಂಗ್ರೆಸ್ ಪಕ್ಷ ಸಂಕಷ್ಟಕ್ಕೆ ಸಿಲುಕಿದ ಜನರಿಗಾಗಿ ಯೋಜನೆ ರೂಪಿಸಿದೆ. ಗೃಹ ಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಗ್ಯಾರಂಟಿ ಕಾರ್ಡ್ ವಿತರಣೆ ಜನರಲ್ಲಿ ಆತ್ಮವಿಶ್ವಾಸ ಮೂಡಿಸಿದೆ ಎಂದರು.

ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಆರ್.ಕೃಷ್ಣಮೂರ್ತಿ , ಕೋಗುಂಡೆ ಗ್ರಾಮ ಪಂಚಾಯತಿ ಅಧ್ಯಕ್ಷ ಬಹದ್ದೂರ್ ಘಟ್ಟ ತಿಪ್ಪೇಸ್ವಾಮಿ,  ಇತರೆ ಸದಸ್ಯರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ  ಕಾಂಗ್ರೆಸ್ ಅಧ್ಯಕ್ಷ ಎಂ.ಪ್ರಕಾಶ್, ತಾಂಡಾ ನಿಗಮದ ಮಾಜಿ ಅಧ್ಯಕ್ಷ ಅನಿಲ್, ಕಾಂಗ್ರೆಸ್ ಓಬಿಸಿ ಘಟಕದ ರಾಜ್ಯ ಉಪಾಧ್ಯಕ್ಷ ಕಿರಣ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ  ಲಿಂಗವ್ವನಾಗತಿಹಳ್ಳಿ ತಿಪ್ಪೇಸ್ವಾಮಿ,  ದುರುಗೇಶ್ ಪೂಜಾರ್, ಮುಖಂಡರಾದ ಚೌಲೀಹಳ್ಳಿ ನಾಗೇಂದ್ರಪ್ಪ, ಸಾಹುಕಾರ್ ಹನುಮಂತಪ್ಪ, ಕಲ್ಲೇಶ್, ಚಿದಾನಂದಪ್ಪ ರೇಣುಕಾರಾಧ್ಯ ವೀರಭದ್ರಪ್ಪ, ನಾಗರಾಜ್, ಹರೀಶ್, ಬಸವರಾಜ್, ಮತ್ತಿತರರಿದ್ದರು.

Leave A Reply

Your email address will not be published.