Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮಂಗಳೂರಿನಲ್ಲಿ ವಿಪರೀತ ಮಳೆ: ಹವಾಮಾನ ವೈಪರೀತ್ಯ ಹಿನ್ನಲೆ ಕಣ್ಣೂರಲ್ಲಿ ಲ್ಯಾಂಡ್‌ ಆದ ವಿಮಾನ

0

ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ವಿಪರೀತ ಮಳೆಯಾಗುತ್ತಿದೆ. ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ಬೆಂಗಳೂರು-ಮಂಗಳೂರು ವಿಮಾನ ಲ್ಯಾಂಡಿಂಗ್‌ ಗೆ ತಡೆ ಎದುರಾಗಿದೆ. ಮಂಗಳೂರು ಏರ್ಪೋರ್ಟ್ ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಹವಾಮಾನ ವೈಪರೀತ್ಯ ಹಿನ್ನಲೆಯಲ್ಲಿ ಕಣ್ಣೂರಿಗೆ  ಡೈವರ್ಟ್ ಮಾಡಲಾಗಿದೆ. ಬೆಂಗಳೂರಿನಿಂದ ಶನಿವಾರ ಬೆಳಗ್ಗೆ 9.55ಕ್ಕೆ ಹೊರಟಿದ್ದ ಇಂಡಿಗೋ ವಿಮಾನ ಮಂಗಳೂರಿನಲ್ಲಿ 11ಗಂಟೆಗೆ ಲ್ಯಾಂಡ್‌ ಆಗಬೇಕಿತ್ತು. ಮೋಡ ಮುಸುಕಿದ ವಾತಾವರಣ ಕಾರಣದಿಂದ ಲ್ಯಾಂಡಿಂಗ್‌ ಸಾಧ್ಯವಾಗದೆ ಕಣ್ಣೂರಿನಲ್ಲಿ ವಿಮಾನ ಇಳಿದಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಇದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಇದೀಗ ವಾತಾವರಣ ತಿಳಿಯಾಗಿದ್ದು, ಮತ್ತೆ ವಿಮಾನ ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದು ಕೆಲವೇ ಕ್ಷಣಗಳಲ್ಲಿ ಮಂಗಳೂರಿನಲ್ಲಿ ಲ್ಯಾಂಡಿಂಗ್‌ ಆಗಲಿದೆ.

Leave A Reply

Your email address will not be published.