Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮಂಗಳೂರು: ಕಟ್ಟಡದಿಂದ ಹಾರಿ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಆತ್ಮಹತ್ಯೆಗೆ ಶರಣು!

0

ಮಂಗಳೂರು: ದ.ಕ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ವಿವೇಕಾನಂದ (56) ಅವರು ಗುರುವಾರ ಬೆಳಗ್ಗೆ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿವೇಕಾನಂದ ಅವರು ವಾಸ್ತವ್ಯವಿದ್ದ ಬಿಜೈಯ ವಸತಿ ಸಂಕೀರ್ಣದ ಮಹಡಿಯಿಂದ ನೆಲಕ್ಕೆ ಹಾರಿದ್ದರು. ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಚುನಾವಣಾ ಕರ್ತವ್ಯ ನಡೆಸಿದ್ದ ಅವರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬುದು ಗೊತ್ತಾಗಿಲ್ಲ. ಡೆತ್‌ನೋಟ್ ಪತ್ತೆಯಾಗಿಲ್ಲ. ಕೆಲವು ದಿನಗಳಿಂದ ಒತ್ತಡದಲ್ಲಿದ್ದರು ಎನ್ನಲಾಗಿದೆ. ಮೂಲತಃ ಸಾಗರದವರಾದ ಅವರು ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಬಿಜೈಯಲ್ಲಿ ವಾಸವಿದ್ದರು. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಕೈಯಲ್ಲಿ ಧರಿಸಿದ್ದ ಬ್ರಾಸ್‌ಲೆಟ್‌ ಅನ್ನು ಆಸ್ಫತ್ರೆ ಅವರಣದಲ್ಲಿ ಕಸಿದು ಪರಾರಿ – ಪರಿಚಿತರ ಕೃತ್ಯ, ದೂರು ದಾಖಲು

ಮೇಲಾಧಿಕಾರಿಗಳಿಂದ ಕಿರುಕುಳ ಅನುಭವಿಸಿದ್ದರೆ ಅಥವಾ ಇತರೆ ಕಾರಣಗಳಿಂದ ಆತ್ಮಹತ್ಯೆ ಮಾಡಿದ್ದಾರೆಯೇ ಎಂದು ತನಿಖೆಯಿಂದ ತಿಳಿದು ಬರಬೇಕಿದೆ.

Leave A Reply

Your email address will not be published.