ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಸುಪ್ರೀಮ್ ಕೋರ್ಟ್ ವಿಚಾರಣೆ ನಡೆಸಿದೆ. ಹಿಂಸಾಚಾರ ಕುರಿತು ತನಿಖೆಯಲ್ಲಿ ಆಗಿರುವ ವಿಳಂಬ ಹಾಗೂ ನಿರ್ಲಕ್ಷದ ವಿರುದ್ಧ ಸುಪ್ರೀಮ್ ಕೋರ್ಟ್ ಮಣಿಪುರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಪರಿಸ್ಥಿತಿ ರಾಜ್ಯ ಪೊಲೀಸರ ನಿಯಂತ್ರಣವನ್ನ ಮೀರಿದೆ ಎಂಬುದು ಸ್ಪಷ್ಟವಾಗಿದೆ. ವಿಚಾರಣೆಗೆ ಮಣಿಪುರ ಡಿಜಿಪಿ ಹಾಜರಾಗಬೇಕು ಎಂದು ಸಿಜೆಐ ಡಿ.ವೈ.ಚಂದ್ರಚೂಡ್ ಸೂಚಿಸಿದ್ದಾರೆ. ಪ್ರಕರಣವನ್ನ ಸಿಬಿಐಗೆ ಹಸ್ತಾಂತರಿಸಬೇಕೆಂಬ ಬೇಡಿಕೆಯ ಬಗ್ಗೆ, ಎಫ್ಐಆರ್ ಸಹ ದಾಖಲಿಸಲಾಗುತ್ತಿಲ್ಲ ಎಂದು ನ್ಯಾಯಾಲಯ ಹೇಳಿದೆ. 6,000 ಎಫ್ಐಆರ್ಗಳಲ್ಲಿ 50 ಎಫ್ಐಆರ್ಗಳನ್ನ ಸಿಬಿಐಗೆ ಹಸ್ತಾಂತರಿಸಲಾಗಿದೆ. ಉಳಿದ 5,950 ಎಫ್ಐಆರ್ಗಳ ಗತಿ ಏನು? ವೀಡಿಯೊ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸುವಲ್ಲಿ ಸಾಕಷ್ಟು ವಿಳಂಬವಾಗಿದೆ ಎಂಬುದು ಬಹಳ ಸ್ಪಷ್ಟವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಹಿಳೆಯರನ್ನು ನಗ್ನವಾಗಿ ಮೆರವಣಿಗೆ ಮಾಡುವ ವೀಡಿಯೊ ಹೊರಬಂದ ನಂತರ ಪೊಲೀಸರು ಅವರ ಹೇಳಿಕೆಯನ್ನ ದಾಖಲಿಸಿದ್ದಾರೆ ಎಂದು ತೋರುತ್ತದೆ ಎಂದು ಸುಪ್ರೀಮ್ ಕೋರ್ಟ್ ಛೀಮಾರಿ ಹಾಕಿದೆ.
[vc_row][vc_column]
BREAKING NEWS
- ಪಾಕ್ ನಲ್ಲಿ ಪ್ರಬಲ ಭೂಕಂಪ ಸಾಧ್ಯತೆ : ಭವಿಷ್ಯ ನುಡಿದ ವಿಜ್ಞಾನಿ
- ‘ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ’- ಸಿಎಂ
- ಶಿವಮೊಗ್ಗದ: ಸೆಕ್ಷನ್ 144 ನಿಷೇಧಾಜ್ಞೆ ಕೊಂಚ ಸಡಿಲಿಸಿದ ಪೊಲೀಸ್ – ಅಗತ್ಯ ವಸ್ತುಗಳ ಖರೀದಿಗೆ ಅವಕಾಶ
- ಹೋಮ್ ವರ್ಕ್ ಮಾಡದಕ್ಕೆ ತಲೆಗೆ ಹೊಡೆದ ಶಿಕ್ಷಕಿ- ಯುಕೆಜಿ ವಿದ್ಯಾರ್ಥಿ ಸಾವು
- ಬೆಂಗಳೂರು: ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಉದ್ಯಮಿಗಳಿಗೆ ಶಾಕ್ ಕೊಟ್ಟ ಐಟಿ ಅಧಿಕಾರಿಗಳು
- ವೀರಶೈವ ಲಿಂಗಾಯತರು ಸ್ವಯಂ ಉದ್ಯೋಗ, ಶೈಕ್ಷಣಿಕ, ಕಾರು ಖರೀದಿ ಸಾಲಕ್ಕೆ ಅರ್ಜಿ ಆಹ್ವಾನ.!
- ಕರ್ನಾಟಕ ಡಿ.ಎಸ್.ಟಿ. ಪಿ.ಹೆಚ್.ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
- ಉದ್ಯಮಶೀಲತಾ ಅಭಿವೃದ್ದಿ ತರಬೇತಿ ಕಾರ್ಯಕ್ರಮ.!
- ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ರಾಷ್ಟ್ರಮಟ್ಟದಲ್ಲಿ 2ನೇ ಬಹುಮಾನ- ಡಿ. ಸುಧಾಕರ್
- ಮಾರಕ ಕಾಯಿಲೆ ಡೆಂಗ್ಯೂ ಬಗ್ಗೆ ಈ ಲಕ್ಷಣಗಳು ಕಂಡುಬಂದರೆ.?