Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮಣಿಪುರ ಸಿಎಂ ರಾಜೀನಾಮೆ ಪ್ರಹಸನ: ಬಿರೇನ್ ಸಿಂಗ್ ರಾಜೀನಾಮೆ ಪತ್ರ ಹರಿದ ಮಹಿಳೆಯರು

0

ಮಣಿಪುರ: ಮಣಿಪುರದಲ್ಲಿ ಎರಡು ತಿಂಗಳಿಂದ ಭುಗಿಲೆದ್ದಿರುವ ಹಿಂಸಾಚಾರ ಗಲಭೆಯನ್ನು ತಡೆಯಲು ವಿಫಲವಾಗಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್‌ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸಿದ್ದವು.

ಇಂದು (ಜೂನ್ 30, ಶುಕ್ರವಾರ) ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುತ್ತಾರೆ ಎಂದು ಹೇಳಲಾಗಿತ್ತು ಆದರೆ ರಾಜೀನಾಮೆ ನೀಡುವುದಿಲ್ಲ ಎಂದು ಬಿರೇನ್ ಸಿಂಗ್‌ ಹೇಳಿದ್ದಾರೆ.

ಬಂಟ್ವಾಳ: ಮೂರನೇ ಮಹಡಿಯಿಂದ ಆಯತಪ್ಪಿ ಬಿದ್ದು ಯುವಕ ಮೃತ್ಯು

ರಾಜೀನಾಮೆ ಪ್ರಹಸನ ಇದೀಗ ತಿರುವು ಪಡೆದುಕೊಂಡಿದ್ದು, ಜನರ ಒತ್ತಡದ ಕಾರಣ ಬಿರೇನ್ ಸಿಂಗ್ ರಾಜೀನಾಮೆ ನೀಡದೇ ಇರಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಈ ನಿರ್ಣಾಯಕ ಘಟ್ಟದಲ್ಲಿ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ” ಎಂದು ತಿಳಿಸಿದ್ದಾರೆ.

ಈ ನಡುವೆ ರಾಜೀನಾಮೆ ನಿರ್ಧಾರ ಬದಲಾಯಿಸಿ ಸಿಎಂ ಬಿರೇನ್ ಸಿಂಗ್‌ ರಾಜೀನಾಮೆ ಪತ್ರ ಹರಿದು ಹಾಕಿದ್ದಾರೆ ಎನ್ನಲಾದ ಪತ್ರವೀಗ ವೈರಲ್ ಆಗುತ್ತಿದೆ.

Leave A Reply

Your email address will not be published.