ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಮಣಿಪುರದ ಹಿಂಸಾಚಾರದಲ್ಲಿ ಬಳಕೆಯಾದ ಶಸ್ತ್ರಾಸ್ತ್ರಗಳನ್ನು ಮ್ಯಾನ್ಮಾರ್ನಿಂದ ಕಳ್ಳಸಾಗಣೆ ಮಾಡಲಾಗಿದೆ ಎಂದು ಗುಪ್ತಚರ ಇಲಾಖೆಯ ಮೂಲಗಳು ತಿಳಿಸಿವೆ. ಈ ಆಯುಧಗಳನ್ನು ಮ್ಯಾನ್ಮಾರ್ನಲ್ಲಿ ಸಕ್ರಿಯವಾಗಿರುವ ಬಂಡುಕೋರರ ಗುಂಪು 3 ವಾಹನಗಳ ಮೂಲಕ ಮಣಿಪುರಕ್ಕೆ ಸಾಗಣೆ ಮಾಡಿದೆ ಎಂದು ಅವು ಹೇಳಿವೆ. ಇದರೊಂದಿಗೆ ನೂರಾರು ಜನರನ್ನು ಬಲಿ ಪಡೆದ ಹಿಂಸಾಚಾರಕ್ಕೆ ವಿದೇಶಿ ಶಕ್ತಿಗಳು ಕುಮ್ಮಕ್ಕು ನೀಡುತ್ತಿರುವುದು ದೃಢಪಟ್ಟಿದೆ. ಇವುಗಳನ್ನು ಮಣಿಪುರಕ್ಕೆ ಸಾಗಣೆ ಮಾಡುವ ಮೊದಲು ಚೀನಾ ಮತ್ತು ಮ್ಯಾನ್ಮಾರ್ನ ಗಡಿಯಲ್ಲಿರುವ ಕಾಳಸಂತೆಯಲ್ಲಿ ಖರೀದಿ ಮಾಡಲಾಗಿದೆ. ಬಳಿಕ ಇವುಗಳನ್ನು ಮ್ಯಾನ್ಮಾರ್ ಮೂಲಕ ತಂದು ಮಣಿಪುರ ತಲುಪಿಸಲಾಗಿದೆ. ಈ ಕುರಿತಂತೆ ಅಸ್ಸಾಂ ರೈಫಲ್ಸ್ ಪಡೆಗೆ ಎಚ್ಚರಿಕೆ ನೀಡಲಾಗಿದ್ದು, ಗಡಿ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ ಎಂದು ಅವು ಹೇಳಿವೆ. ಶಸ್ತ್ರಾಸ್ತ್ರಗಳ ಕಳ್ಳಸಾಗಣೆಗೆ ಸಂಬಂಧಿಸಿದಂತೆ ಇಂಫಾಲ್ನಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಇವರಿಂದ ಸುಮಾರು 2.5 ಲಕ್ಷ ರೂ. ನಗದು, ಮೊಬೈಲ್ ಫೋನ್ಗಳು ಮತ್ತು 2 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭದ್ರತಾ ಪಡೆಗಳು ತಿಳಿಸಿವೆ.
[vc_row][vc_column]
BREAKING NEWS
- ‘ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನ ಲೆಕ್ಕಾಚಾರದ ತಂತ್ರಗಳು ಕೆಲಸ ಮಾಡುವುದಿಲ್ಲ’- ಬಿಎಸ್ವೈ
- ಬೆಳಗಾವಿ : ಮಂತ್ರಿಗಳೆಲ್ಲ ತೆಲಂಗಾಣಕ್ಕೆ ಹೋಗಿ ಅಲ್ಲಿನ ಎಂಎಲ್ಎ ಗಳ ಸೇವೆ ಮಾಡ್ತಿದ್ದಾರೆ – ವಿಪಕ್ಷ ನಾಯಕ ಆರ್ ಅಶೋಕ ಕಿಡಿ
- 10 ಮಂದಿ ಬಿಜೆಪಿ ಸಂಸದರು ಸಂಸತ್ ಸ್ಥಾನಗಳಿಗೆ ರಾಜೀನಾಮೆ
- ಸರಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗಟ್ಟಲು ವಿಧೇಯಕ ಮಂಡನೆ
- ಉಧಂಪುರ ದಾಳಿ ಸಂಚುಕೋರ, 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ನ ಸಹಾಯಕ ಪಾಕ್ನಲ್ಲಿ ಹತ್ಯೆ
- ಕೊನೆಗೂ ಉರ್ಫಿ ಜಾವೇದ್ ಇನ್ಸ್ಟಾಗ್ರಾಮ್ ಅಕೌಂಟ್ ಡಿಲೀಟ್
- ‘ತೊಡೆಯ ಮೇಲೆ ಕೂರಿಸಿಕೊಂಡು ಮುದ್ದಾಡುತ್ತಿದ್ದವರು ಈಗ ಮುಸ್ಲಿಂ ದ್ವೇಷಿ’- ಹೆಚ್ಡಿಕೆಗೆ ದಿನೇಶ್ ಗುಂಡೂರಾವ್ ಟಾಂಗ್
- ಕೊಳವೆ ಬಾವಿಗೆ ಬಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಮೃತ್ಯು
- ಗುರಿ ತಪ್ಪಿದ ಸೇನಾ ಡ್ರೋನ್ ದಾಳಿ; 85 ಮಂದಿ ನಾಗರಿಕರು ಮೃತ್ಯು
- ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆ ಹೆಚ್ಚಾಗಿ ಕಾಣಿಸುತ್ತದೆ – ಏಮ್ಸ್ ವರದಿ