Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮರ್ಯಾದಾ ಹತ್ಯೆ: ಬಾಲಕಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ತಂದೆ, ಸಹೋದರರು.!

0

ಲಕ್ನೋ: 17 ವರ್ಷದ ಬಾಲಕಿಯನ್ನು ಆಕೆಯ ತಂದೆ ಮತ್ತು ಇಬ್ಬರು ಸಹೋದರರು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಶನಿವಾರ ನಡೆದಿದೆ. ಸರಾಯ್ ಅಕಿಲ್ ಪ್ರದೇಶದ ಮುಜಾಫರ್‌ಪುರ ಟಿಕ್ರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತ ಬಾಲಕಿ ಪ್ರೀತಿಯನ್ನು ಕುಟುಂಬ ಸದಸ್ಯರು ವಿರೋಧಿಸಿದರೂ ಆಕೆ ಮಾತ್ರ ಅದೇ ಗ್ರಾಮದ ವ್ಯಕ್ತಿಯೊಂದಿಗೆ ಆಗಾಗ್ಗೆ ಫೋನ್‌ನಲ್ಲಿ ಮಾತನಾಡುತ್ತಿದ್ದಳು. ಶನಿವಾರ ಕೂಡ ಬಾಲಕಿ ತನ್ನ ಗೆಳೆಯನೊಂದಿಗೆ ಫೋನ್‌ನಲ್ಲಿ ಮಾತನಾಡುವಾಗ ಸಿಕ್ಕಿಬಿದ್ದಿದ್ದಾಳೆ. ಇದರಿಂದ ಕೋಪಗೊಂಡ ತಂದೆ ಮನರಖಾನ್ ಸಿಂಗ್ ಮತ್ತು ಇಬ್ಬರು ಸಹೋದರರಾದ ರಾಧೇಶ್ಯಾಮ್ ಸಿಂಗ್ ಮತ್ತು ಘನಶ್ಯಾಮ್ ಸಿಂಗ್ ಸೇರಿ ಬಾಲಕಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದಿದ್ದಾರೆ. ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಬಾಲಕಿಯ ತಂದೆ ಹಾಗೂ ಸಹೋದರರು ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾರೆ.

Leave A Reply

Your email address will not be published.