Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮಲ್ಲೇಶ್ವರಂ ನಿವಾಸದಲ್ಲಿ ಸ್ಪಂದನಾ ರಾಘವೇಂದ್ರ ಅಂತಿಮ ದರ್ಶನ

0

ಬೆಂಗಳೂರು: ಕಳೆದರಡು ದಿನದ ಹಿಂದೆ ಥಾಯ್ಲೆಂಡ್‌ ನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಸ್ಯಾಂಡಲ್ ವುಡ್ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥೀವ ಶರೀರ ಮಂಗಳವಾರ ತಡರಾತ್ರಿ ರಾತ್ರಿ ಬೆಂಗಳೂರಿಗೆ ತರಲಾಗಿದೆ.

ಸ್ಪಂದನಾ ತವರು ಮನೆಯಾದ ಬಿ.ಕೆ ಶಿವರಾಮ್ ಅವರ ನಿವಾಸದಲ್ಲಿ ಸ್ಪಂದನಾ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಮಧ್ಯಾಹ್ನ 2ಗಂಟೆವರೆಗೆ ಅವಕಾಶ ನೀಡಲಾಗಿದೆ.

ಸ್ಪಂದನಾ ಅವರ ಅಂತಿಮ ದರ್ಶನ ಪಡೆಯಲು ಕುಟುಂಬದ ಆಪ್ತರು, ಚಿತ್ರರಂಗ, ರಾಜಕೀಯವಲಯದ ಗಣ್ಯರು ಹಾಗೂ ಅಭಿಮಾನಿಗಳು ಆಗಮಿಸುತ್ತಿದ್ದಾರೆ.

ಮಧ್ಯಾಹ್ನದ ಬಳಿಕ ಹರಿಶ್ಚಂದ್ರ ಘಾಟ್‌ ನಲ್ಲಿ ಸ್ಪಂದನಾ ಅವರ ಅಂತಿಮ ಸಂಸ್ಕಾರ ನೆರವೇರಲಿದೆ ಎಂದು ವರದಿ ತಿಳಿಸಿದೆ. ಪಾರ್ಥೀವ ಶರೀರ ಅಂತಿಮ ದರ್ಶನ ಪಡೆಯಲು ಎರಡು ಗೇಟ್‌ ಗಳನ್ನು ನಿರ್ಮಿಸಲಾಗಿದೆ.

ನಿವೃತ್ತ ಪೊಲೀಸ್‌ ಅಧಿಕಾರಿ ಬಿ.ಕೆ.ಶಿವರಾಂ ಪುತ್ರಿ, ನಿರ್ಮಾಪಕ ಎಸ್‌.ಎ.ಚಿನ್ನೇಗೌಡ ಅವರ ಸೊಸೆ ಸ್ಪಂದನಾ ವಾರದ ಹಿಂದೆ ತಮ್ಮ ಸೋದರ ಸಂಬಂಧಿಗಳ ಜೊತೆ ಪ್ರವಾಸಕ್ಕೆಂದು ಥಾಯ್ಲೆಂಡ್‌ಗೆ ತೆರಳಿದ್ದರು. ಭಾನುವಾರ ಮರಳಬೇಕಿತ್ತು. ಆದರೆ, ವಿಜಯ ರಾಘವೇಂದ್ರ ಚಿತ್ರೀಕರಣ ಮುಗಿಸಿಕೊಂಡ ನಂತರ ಭಾನುವಾರ ಬ್ಯಾಂಕಾಕ್‌ನಲ್ಲಿದ್ದ ಅವರನ್ನು ಸೇರಿಕೊಂಡಿದ್ದರು. ರಾತ್ರಿ ಮಲಗಿದ್ದ ಸ್ಪಂದನಾ ನಿದ್ರಾವಸ್ಥೆಯಲ್ಲಿಯೇ ನಿಧನರಾಗಿದ್ದರು.

Leave A Reply

Your email address will not be published.