Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲ್ಲ : ಭವಿಷ್ಯ ನುಡಿದ ಸ್ವಾಮೀಜಿ

0

ರಾಷ್ಟ್ರ ರಾಜಕಾರಣದ ಬಗ್ಗೆ ಯಶವಂತ ಗುರೂಜಿ ಭವಿಷ್ಯ ನುಡಿದಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲ್ಲ, ಓರ್ವ ಮಹಿಳೆ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ನುಡಿದ್ದಾರೆ. ಶಿವರಾತ್ರಿ ಮುಂಚೆ ಚುನಾವಣೆ ನಡೆದ್ರೆ ಮಾತ್ರ ಮೋದಿ ಪ್ರಧಾನಿ, ಇಲ್ದಿದ್ರೆ ಮಹಿಳೆಗೆ ಪ್ರಧಾನಿ ಪಟ್ಟವಂತೆ. ಕರ್ನಾಟಕದಲ್ಲಿ ಬಿಎಸ್‌ವೈ, ಬಿಜೆಪಿಯ ಕುಸಿತ ಹಾಗೂ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಬರಲಿದೆ ಎನ್ನುವ ಮಹಾ ಭವಿಷ್ಯ ನುಡಿದಿದ್ದ ಶನೇಶ್ವರ ದೇವಸ್ಥಾನದ ಧರ್ಮದರ್ಶಿ ಡಾ. ಯಶವಂತ್‌ ಗುರೂಜಿ ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಸಂಚಲ ಮೂಡಿಸುವಂಥ ಕಾಲಜ್ಞಾನ ನುಡಿದಿದ್ದಾರೆ. ಅವರು ಹೇಳಿರುವ ಪ್ರಕಾರ ಮುಂದಿನ ಶಿವರಾತ್ರಿಯ ಒಳಗಾಗಿ ಲೋಕಸಭೆ ಚುನಾವಣೆ ನಡೆದಲ್ಲಿ ಮಾತ್ರವೇ ಪ್ರಧಾನಿ ನರೇಂದ್ರ ಮೋದಿ ಅಧಿಕಾರವನ್ನು ಉಳಿಸಿಕೊಂಡು ಮೂರನೇ ಬಾರಿಗೆ ಅಧಿಕಾರ ಹಿಡಿಯಲಿದ್ದಾರೆ. ಕಾಲಜ್ಞಾನ ಪ್ರಕಾರ ಮುಂದಿನ ಪ್ರಧಾನಿ ಆಗೋ ಯೋಗ ಒಬ್ಬ ಮಹಿಳೆಗೆ ಇದೆ ಎಂದಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಇದೇ ಸ್ವಾಮೀಜಿ ಭವಿಷ್ಯ ನುಡಿದಿದ್ದರು. ಆ ಭವಿಷ್ಯ ನಿಜವಾಗಿತ್ತು. ಇದೀಗ ರಾಷ್ಟ್ರ ರಾಜಕಾರಣದ ಬಗ್ಗೆ ಇವರು ಭವಿಷ್ಯ ಹೇಳಿದ್ದಾರೆ.

Leave A Reply

Your email address will not be published.