Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ರಾಜ್ಯದಲ್ಲಿ ಡಿಕೆಶಿ ‘ಬ್ರದರ್ಸ್’ ವಿಧ್ವಂಸಕ ಕೃತ್ಯ ಎಸೆಗಲು ಹೊಂಚು ಹಾಕಿ ಸಿಕ್ಕಿಬಿದ್ದಿದ್ದಾರೆ: ಬಿಜೆಪಿ ಕಿಡಿ

0

ಬೆಂಗಳೂರು: ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಜ್ಜಾಗಿದ್ದ ಐವರು ಎಲ್‌ಇಟಿ ಶಂಕಿತ ಉಗ್ರರು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಲೆಗೆ ಬಿದ್ದಿದ್ದಾರೆ. ಈ ಶಂಕಿತ ಉಗ್ರರು ಬೆಂಗಳೂರನ್ನೇ ಟಾರ್ಗೆಟ್ ಮಾಡಿದ್ದರು ಎಂಬ ಸ್ಫೋಟಕ ಮಾಹಿತಿ ವಿಚಾರಣೆ ವೇಳೆ ಲಭ್ಯವಾಗಿದೆ ಎನ್ನಲಾಗಿದೆ. ಈ ವಿಚಾರವಾಗಿ ಬಿಜೆಪಿಯು ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಕಿಡಿಕಾರಿದೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ‘ಬೆಂಗಳೂರಿಗೆ ಬಾಂಬಿಡಲು ಮುಂದಾದವರ ರಕ್ಷಣೆ ರಾಜ್ಯ ಸರಕಾರ ಮಾಡದಿರಲಿ. ಕರ್ನಾಟಕದಲ್ಲಿ ಡಿಕೆ ಶಿವಕುಮಾರ್‌ ಅವರ ‘ಬ್ರದರ್ಸ್’ ವಿಧ್ವಂಸಕ ಕೃತ್ಯ ಎಸೆಗಲು ಹೊಂಚು ಹಾಕಿ ಸಿಕ್ಕಿಬಿದ್ದಿದ್ದಾರೆ. ಸಿದ್ದರಾಮಯ್ಯ ಅವರ ತುಘಲಕ್ ಸರ್ಕಾರದ ಆಗಮನದಿಂದಾಗಿ ಮತಾಂಧ ಜಿಹಾದಿಗಳು ಉಗ್ರರ ಸಖ್ಯ ಬೆಳೆಸಿ ಬಾಲ ಬಿಚ್ಚಿದ್ದಾರೆ. ರಾಜ್ಯ ಕಾಂಗ್ರೆಸ್‌ ಇನ್ನಾದರೂ ತುಷ್ಟೀಕರಣ ರಾಜಕೀಯ ಬಿಟ್ಟು, ದೇಶದ ಭದ್ರತೆ, ಸುರಕ್ಷತೆಗೆ ಒತ್ತು ನೀಡಲಿ..! ಎಂದು ವಾಗ್ದಾಳಿ ನಡೆಸಿದೆ.

Leave A Reply

Your email address will not be published.