ನವದೆಹಲಿ: ವಿಶ್ವಕಪ್ ಗೆಲ್ಲಿ ಅಥವಾ ಗೆಲ್ಲದಿರಲಿ, ಪಾಕಿಸ್ತಾನದ ವಿರುದ್ಧ ಮಾತ್ರ ಸೋಲಬೇಡಿ ಎಂದು ಟೀಂ ಇಂಡಿಯಾ ಅನುಭವಿ ಆರಂಭಿಕ ಆಟಗಾರ ಶಿಖರ್ ಧವನ್ ಭಾರತ ತಂಡಕ್ಕೆ ಕಿವಿಮಾತು ಹೇಳಿದ್ದಾರೆ. ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಶಿಖರ್ ಧವನ್ ಅವರು, ಭಾರತ-ಪಾಕಿಸ್ತಾನ ನಡುವಿನ ಪಂದ್ಯವು ಹೈವೋಲ್ಟೆಜ್ನಿಂದ ಕೂಡಿರುತ್ತದೆ. ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಮೈದಾನದ ಒಳಗೆ ಹಾಗೂ ಹೊರಗೆ ಪಂದ್ಯವನ್ನು ವೀಕ್ಷಿಸುತ್ತಾರೆ. ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತವು ಅಧಿಕ ಗೆಲುವು ದಾಖಲಿಸಿದೆ ಎಂದು ಧವನ್ ತಿಳಿಸಿದ್ದಾರೆ. ಐಸಿಸಿ ಏಕದಿನ ವಿಶ್ವಕಪ್ 2023 ಭಾರತದಲ್ಲಿ ಅಕ್ಟೋಬರ್ 5 ರಿಂದ ಪ್ರಾರಂಭವಾಗಲಿದೆ. ನವೆಂಬರ್ 19ರಂದು ಫೈನಲ್ನೊಂದಿಗೆ ವಿಶ್ವಕಪ್ ಮುಕ್ತಾಯಗೊಳ್ಳಲಿದೆ. ಈ ಬಾರಿಯ ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಹಾಟ್ ಫೇವರಿಟ್ ಆಗಿ ಕಣಕ್ಕೆ ಇಳಿಯಲಿದೆ. ಅದಕ್ಕೆ ಮುಖ್ಯ ಕಾರಣ ತವರು ನೆಲದಲ್ಲಿ ಆಡುತ್ತಿರುವುದು. 2011ರಲ್ಲಿ ಭಾರತ ವಿಶ್ವಕಪ್ ಆತಿಥ್ಯ ವಹಿಸಿದಾಗ ಭಾರತ ತಂಡ ಚಾಂಪಿಯನ್ ಆಗಿತ್ತು.
[vc_row][vc_column]
BREAKING NEWS
- ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್ಗೆ ಜಾಮೀನು
- ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್ ಇಂದು ಹಸ್ತಾಂತರ: ಸಿಎಂ
- ತೆಲಂಗಾಣ ಸಿಎಂ ಆಯ್ಕೆ ತೀರ್ಮಾನ ಎಐಸಿಸಿ ಅಧ್ಯಕ್ಷರ ಹೆಗಲಿಗೆ: ಡಿಕೆಶಿ
- ಮಿಚಾಂಗ್ ಅಬ್ಬರಕ್ಕೆ ಮುಳುಗಿದ ಚೆನ್ನೈ
- ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗಳೂರು ಸೇರಿ ರಾಜ್ಯದ 63 ಕಡೆ ದಾಳಿ
- 200 ಟನ್ ಮೆಕ್ಕೆಜೋಳ ಕುಸಿತ ಪ್ರಕರಣ: ಮೂವರು ಕಾರ್ಮಿಕರ ಸಾವು
- ಬ್ರೇಕಿಂಗ್ ಇಂದು ಬೆಳ್ಳಂಬೆಳಗ್ಗೆ 63 ಕಡೆ ಲೋಕಾಯುಕ್ತ ದಾಳಿ.!
- ತಡರಾತ್ರಿ ಫುಡ್ಸ್ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆಜೋಳ ಕುಸಿತ ಮೂವರು ಸಾವು.!
- ಮಿಚಾಂಗ್ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ.!
- ಕೊಡಗು ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ