Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಶೌಚಾಲಯ ವಿಡಿಯೊ ಚಿತ್ರೀಕರಣ ಘಟನೆಯನ್ನುಬಿಜೆಪಿ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ: ಪ್ರಿಯಾಂಕ್ ಖರ್ಗೆ

0

ಬೆಂಗಳೂರು :ಉಡುಪಿ ಕಾಲೇಜಿನ  ವಿಡಿಯೊ ಚಿತ್ರೀಕರಣ ಘಟನೆಯನ್ನು ಬಿಜೆಪಿಯವರು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು  ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಿಸಿದ ಘಟನೆ ರಾಜ್ಯಾದ್ಯಂತ ಸುದ್ದಿಯಾಗುತ್ತಿದೆ. ಇತ್ತ ಬಿಜೆಪಿ ಕಾರ್ಯಕರ್ತರು, ಎಬಿವಿಪಿ ಸಂಘಟನೆ ಬೀದಿಗಿಳಿದು ಹೋರಾಟ ನಡೆಸುತ್ತಿದೆ.

ಘಟನೆ ಕುರಿತು ಮಾಧ್ಯಮ ಪ್ರತಿನಿಧಿಗಳು ಸಚಿವ ಪ್ರಿಯಾಂಕ್ ಖರ್ಗೆಯವರನ್ನು ಪ್ರಶ್ನಿಸಿದ್ದಕ್ಕೆ , ಎಬಿವಿಪಿಯಂಥ ಸಂಘಟನೆಯವರು ಬಿಜೆಪಿಯ ಸಚಿವರನ್ನೇ ಬಿಟ್ಟಿರಲಿಲ್ಲ. ಆರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದಾಗ ಅವರ ಕಚೇರಿಗೆ ಮುತ್ತಿಗೆ ಹಾಕಲು ನೋಡಿದ್ದರು ಎಂದರು.

ಈಗ ಬಿಜೆಪಿಯ ಸದಸ್ಯರಾದ ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆ ಖುಷ್ಬೂ ಅವರು ಬಂದು ಕಾಲೇಜಿನ ಶೌಚಾಲಯದಲ್ಲಿ ಹಿಡನ್ ಕ್ಯಾಮರಾಗಳು ಇರಲಿಲ್ಲ ಎಂದು ಹೇಳಿದ್ದಾರೆ. ನಾವು ಕೂಡ ಕ್ರಿಮಿನಲ್ ಉದ್ದೇಶದಿಂದ ವಿದ್ಯಾರ್ಥಿನಿಯರು ಹೀಗೆ ಮಾಡಿರಲಿಲ್ಲ ಎಂದಿದ್ದೇವು. ಈಗ ಬಿಜೆಪಿ ಮುಖಂಡರುಗಳೆಲ್ಲ ಮಾತನಾಡುತ್ತಿಲ್ಲ ಏಕೆ ಎಂದು ಕೇಳಿದರು.

Leave A Reply

Your email address will not be published.