Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

‘ಸರ್ಕಾರ ಮುಸ್ಲಿಂ ಓಲೈಕೆಗಾಗಿ ಸಂವಿಧಾನ ಬಾಹಿರವಾಗಿ ವರ್ತಿಸಿದರೆ ಪರಿಣಾಮ ನೆಟ್ಟಗಿರಲ್ಲ’ – ಸುನೀಲ್ ಕುಮಾರ್

0

ಬೆಂಗಳೂರು: ಸರ್ಕಾರ ಮುಸ್ಲಿಂ ಓಲೈಕೆಗಾಗಿ ಸಂವಿಧಾನ ಬಾಹಿರವಾಗಿ ವರ್ತಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ಕರ್ನಾಟಕದ ಪೊಲೀಸರು ಆಳುವ ಸರ್ಕಾರದ ಆಳುಗಳಂತೆ ವರ್ತಿಸುವುದಕ್ಕೆ ಮುನ್ನ ಅಂದು ನಡೆದ ಭೀಬತ್ಸ ಘಟನೆಯನ್ನು ನೆನೆಪು ಮಾಡಿಕೊಳ್ಳಲಿ ಎಂದು ಶಾಸಕ ಸುನೀಲ್ ಕುಮಾರ್ ಸರ್ಕಾರದ ವಿರುದ್ದ ವಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಪೊಲೀಸರು ಆಳುವ ಸರ್ಕಾರದ ಆಳುಗಳಂತೆ ವರ್ತಿಸುವುದಕ್ಕೆ ಮುನ್ನ ಅಂದು ನಡೆದ ಭೀಬತ್ಸ ಘಟನೆಯನ್ನು ನೆನೆಪು ಮಾಡಿಕೊಳ್ಳಲಿ. ಉಗ್ರ ಮನಸ್ಥಿತಿಯ ವ್ಯಕ್ತಿಗಳಿಗೆ ಅಮಾಯಕರ ಪಟ್ಟಕಟ್ಟಿ ದೇಶವನ್ನು ಸಿರಿಯಾ ಮಾಡುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

ಇನ್ನು ಶಾಸಕ ತನ್ವೀರ್ ಸೇಠ್ ಬರೆದ ಪತ್ರ ಆಧರಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಪೊಲೀಸ್ ಇಲಾಖೆಗೆ ಬರೆದ ಪತ್ರ ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ. ಸರ್ಕಾರ ಮುಸ್ಲಿಂ ಓಲೈಕೆಗಾಗಿ ಸಂವಿಧಾನಬಾಹಿರವಾಗಿ ವರ್ತಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ಕರ್ನಾಟಕದ ಪೊಲೀಸರು ಆಳುವ ಸರ್ಕಾರದ ಆಳುಗಳಂತೆ ವರ್ತಿಸುವುದಕ್ಕೆ ಮುನ್ನ ಆ ದಿನ ನಡೆದ ಭೀಬತ್ಸ ಘಟನೆಯನ್ನು ನೆನಪು ಮಾಡಿಕೊಳ್ಳಲಿ ಎಂದು ಆಕ್ರೋಶ ಹೊರಹಾಕಿದ್ದಾರೆ.

Leave A Reply

Your email address will not be published.